<p><strong>ಮಡಿಕೇರಿ:</strong> ಹೊರ ಗುತ್ತಿಗೆ ನೌಕರರ ನಿರ್ವಹಣೆಯನ್ನು ಹೊಸ ಏಜೆನ್ಸಿ ವಹಿಸಿಕೊಂಡಿದ್ದು, ಇದರಿಂದ ವೇತನ ಕಡಿಮೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಹೊರಗುತ್ತಿಗೆ ನೌಕರರು ಜಿಲ್ಲಾ ಕೋವಿಡ್ ಆಸ್ಪತ್ರೆ ಎದುರು ಬುಧವಾರ ಬೆಳಿಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆಸ್ಪತ್ರೆಯ ಹೊರ ಗುತ್ತಿಗೆ ನೌಕರರ ನಿರ್ವಹಣೆ ಗುತ್ತಿಗೆ ಪಡೆದಿದ್ದ ಸಂಸ್ಥೆಯ ಬದಲಾವಣೆಯಾಗಿದ್ದು, ಬುಧವಾರದಿಂದ ನೂತನ ಏಜೆನ್ಸಿ ಈ ಜವಾಬ್ದಾರಿ ಹೊತ್ತಿದೆ. ಇದು ನೌಕರರ ಆತಂಕಕ್ಕೆ ಕಾರಣವಾಗಿದೆ. ಕೆಲಸ ಸ್ಥಗಿತಗೊಳಿಸಿ ಆಕ್ರೋಶ ಹೊರಹಾಕಿದರು.</p>.<p>5 ವರ್ಷಗಳಿಂದ ಒಂದೇ ವೇತನಕ್ಕೆ ಕೆಲಸ ನಿರ್ವಹಿಸುತ್ತಿದ್ದೇವೆ. ಮೊದಲು ಶ್ರೀರಂಗನಾಥ್ ಎಂಬ ಏಜೆನ್ಸಿ ಕಾರ್ಯನಿರ್ವಹಿಸುತ್ತಿತ್ತು. ಈಗ ಏಜೆನ್ಸಿ ಬದಲಾಗಿದೆ ಎಂದು ಹೇಳಲಾಗುತ್ತಿದೆ. ಏಜೆನ್ಸಿಯವರು ಖುದ್ದಾಗಿ ಬಂದು ನೌಕರರ ಗೊಂದಲ ನಿವಾರಿಸಬೇಕು ಎಂದು ಪ್ರತಿಭಟನಕಾರರು ಪಟ್ಟುಹಿಡಿದರು.</p>.<p>ಜಿಲ್ಲೆಯಲ್ಲಿ 300ರಿಂದ 400 ಮಂದಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ನೂತನ ಏಜೆನ್ಸಿ ಪಡೆದ ಸಂಸ್ಥೆಯು ವೇತನ ಹೆಚ್ಚು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಗುತ್ತಿಗೆ ನೌಕರರಾದ ದೀಪ್ತಿ ಮಾತನಾಡಿ, ಸಿಬ್ಬಂದಿಯನ್ನು ಇದೀಗ ಹೊಸದಾಗಿ ಸುರಭಿ ಎಂಬ ಏಜೆನ್ಸಿ ತೆಗೆದುಕೊಂಡಿದೆ. ಒಪ್ಪಂದಕ್ಕೆ ಸಹಿ ಮಾಡುವಂತೆ ಒತ್ತಡ ಹೇರುತ್ತಿದೆ. ಅಲ್ಲದೆ, 50 ವರ್ಷ ಮೀರಿದ ನೌಕರರನ್ನು ಕೆಲಸದಿಂದ ವಜಾಗೊಳಿಸುವ ಬೆದರಿಕೆ ಹಾಕಿದೆ. ಏಕಾಏಕಿ ಈ ನಿಯಮ ಹೇರಿದರೆ ನೌಕರರಿಗೆ ತೊಂದರೆಯಾಗಲಿದೆ. ನಮ್ಮ ಬದುಕು ಬೀದಿಗೆ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಧನಲಕ್ಷ್ಮಿ ಮಾತನಾಡಿ, ಕನಿಷ್ಠ ವೇತನ ಘೋಷಣೆ ಮಾಡಬೇಕು. ಕಾರ್ಮಿಕರ ಕಾಯ್ದೆಯಂತೆ ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುವವರಿಗೆ ವೃತ್ತಿ ಆಧಾರದಲ್ಲಿ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕೋವಿಡ್ ಸಂಕಷ್ಟದ ಕಾಲದಲ್ಲಿ ಕೂಡ ಪ್ರಾಣದ ಹಂಗು ತೊರೆದು ನೌಕರರು ಕಾರ್ಯ ನಿರ್ವಹಿಸಿದ್ದೇವೆ. ಏಜೆನ್ಸಿ ನೌಕರರ ಬಳಿ ಬಂದು ಗೊಂದಲ ನಿವಾರಿಸಬೇಕು ಎಂದು ಒತ್ತಾಯಿಸಿದರು. ನೌಕರರ ಪ್ರತಿಭಟನೆಗೆ ಕೊಡಗು ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿತ್ತು. ವೇದಿಕೆ ಅಧ್ಯಕ್ಷ ಪವನ್ ಪೆಮ್ಮಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಹೊರ ಗುತ್ತಿಗೆ ನೌಕರರ ನಿರ್ವಹಣೆಯನ್ನು ಹೊಸ ಏಜೆನ್ಸಿ ವಹಿಸಿಕೊಂಡಿದ್ದು, ಇದರಿಂದ ವೇತನ ಕಡಿಮೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಹೊರಗುತ್ತಿಗೆ ನೌಕರರು ಜಿಲ್ಲಾ ಕೋವಿಡ್ ಆಸ್ಪತ್ರೆ ಎದುರು ಬುಧವಾರ ಬೆಳಿಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆಸ್ಪತ್ರೆಯ ಹೊರ ಗುತ್ತಿಗೆ ನೌಕರರ ನಿರ್ವಹಣೆ ಗುತ್ತಿಗೆ ಪಡೆದಿದ್ದ ಸಂಸ್ಥೆಯ ಬದಲಾವಣೆಯಾಗಿದ್ದು, ಬುಧವಾರದಿಂದ ನೂತನ ಏಜೆನ್ಸಿ ಈ ಜವಾಬ್ದಾರಿ ಹೊತ್ತಿದೆ. ಇದು ನೌಕರರ ಆತಂಕಕ್ಕೆ ಕಾರಣವಾಗಿದೆ. ಕೆಲಸ ಸ್ಥಗಿತಗೊಳಿಸಿ ಆಕ್ರೋಶ ಹೊರಹಾಕಿದರು.</p>.<p>5 ವರ್ಷಗಳಿಂದ ಒಂದೇ ವೇತನಕ್ಕೆ ಕೆಲಸ ನಿರ್ವಹಿಸುತ್ತಿದ್ದೇವೆ. ಮೊದಲು ಶ್ರೀರಂಗನಾಥ್ ಎಂಬ ಏಜೆನ್ಸಿ ಕಾರ್ಯನಿರ್ವಹಿಸುತ್ತಿತ್ತು. ಈಗ ಏಜೆನ್ಸಿ ಬದಲಾಗಿದೆ ಎಂದು ಹೇಳಲಾಗುತ್ತಿದೆ. ಏಜೆನ್ಸಿಯವರು ಖುದ್ದಾಗಿ ಬಂದು ನೌಕರರ ಗೊಂದಲ ನಿವಾರಿಸಬೇಕು ಎಂದು ಪ್ರತಿಭಟನಕಾರರು ಪಟ್ಟುಹಿಡಿದರು.</p>.<p>ಜಿಲ್ಲೆಯಲ್ಲಿ 300ರಿಂದ 400 ಮಂದಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ನೂತನ ಏಜೆನ್ಸಿ ಪಡೆದ ಸಂಸ್ಥೆಯು ವೇತನ ಹೆಚ್ಚು ಮಾಡಬೇಕು ಎಂದು ಆಗ್ರಹಿಸಿದರು.</p>.<p>ಗುತ್ತಿಗೆ ನೌಕರರಾದ ದೀಪ್ತಿ ಮಾತನಾಡಿ, ಸಿಬ್ಬಂದಿಯನ್ನು ಇದೀಗ ಹೊಸದಾಗಿ ಸುರಭಿ ಎಂಬ ಏಜೆನ್ಸಿ ತೆಗೆದುಕೊಂಡಿದೆ. ಒಪ್ಪಂದಕ್ಕೆ ಸಹಿ ಮಾಡುವಂತೆ ಒತ್ತಡ ಹೇರುತ್ತಿದೆ. ಅಲ್ಲದೆ, 50 ವರ್ಷ ಮೀರಿದ ನೌಕರರನ್ನು ಕೆಲಸದಿಂದ ವಜಾಗೊಳಿಸುವ ಬೆದರಿಕೆ ಹಾಕಿದೆ. ಏಕಾಏಕಿ ಈ ನಿಯಮ ಹೇರಿದರೆ ನೌಕರರಿಗೆ ತೊಂದರೆಯಾಗಲಿದೆ. ನಮ್ಮ ಬದುಕು ಬೀದಿಗೆ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಧನಲಕ್ಷ್ಮಿ ಮಾತನಾಡಿ, ಕನಿಷ್ಠ ವೇತನ ಘೋಷಣೆ ಮಾಡಬೇಕು. ಕಾರ್ಮಿಕರ ಕಾಯ್ದೆಯಂತೆ ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುವವರಿಗೆ ವೃತ್ತಿ ಆಧಾರದಲ್ಲಿ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕೋವಿಡ್ ಸಂಕಷ್ಟದ ಕಾಲದಲ್ಲಿ ಕೂಡ ಪ್ರಾಣದ ಹಂಗು ತೊರೆದು ನೌಕರರು ಕಾರ್ಯ ನಿರ್ವಹಿಸಿದ್ದೇವೆ. ಏಜೆನ್ಸಿ ನೌಕರರ ಬಳಿ ಬಂದು ಗೊಂದಲ ನಿವಾರಿಸಬೇಕು ಎಂದು ಒತ್ತಾಯಿಸಿದರು. ನೌಕರರ ಪ್ರತಿಭಟನೆಗೆ ಕೊಡಗು ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿತ್ತು. ವೇದಿಕೆ ಅಧ್ಯಕ್ಷ ಪವನ್ ಪೆಮ್ಮಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>