ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಅಡುಗೆ ಅನಿಲ ದುರಂತ; ಗಾಯಗೊಂಡಿದ್ದ ರಮೇಶ್ ಪತ್ನಿ ಸಾವು

Published 10 ಅಕ್ಟೋಬರ್ 2023, 2:27 IST
Last Updated 10 ಅಕ್ಟೋಬರ್ 2023, 2:27 IST
ಅಕ್ಷರ ಗಾತ್ರ

ಮಡಿಕೇರಿ: ಅಡುಗೆ ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಭಾನುವಾರವಷ್ಟೇ ಮೃತಪಟ್ಟಿದ್ದ ಜೀವನದಾರಿ ಆಶ್ರಮದ ಸ್ಥಾಪಕ ರಮೇಶ್ ಅವರ ಪತ್ನಿ ರೂಪಾ (38) ಅವರು ಸೋಮವಾರ ತಡರಾತ್ರಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟರು. ಇವರ ಅಂತ್ಯಕ್ರಿಯೆ ಮಂಗಳವಾರ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇವರಿಗೆ ಮೂವರು ಪುತ್ರಿಯರು ಇದ್ದಾರೆ.

ರಮೇಶ್ ಅವರ ತಂದೆ ಕರಿಯಪ್ಪ (82) ಸಹ ಘಟನೆಯಲ್ಲಿ ಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

ರಸ್ತೆಬದಿಯಲ್ಲಿ ವಾಸಿಸುತ್ತಿದ್ದ ನಿರ್ಗತಿಕರು, ವೃದ್ಧರು, ಅಂಗವಿಕಲರಿಗಾಗಿ ರಮೇಶ್ ಅವರು ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ತೊಂಡೂರಿನಲ್ಲಿ ಆಶ್ರಮ ಸ್ಥಾಪಿಸಿದ್ದರು. ಸದ್ಯ ಆಶ್ರಮದಲ್ಲಿ 36 ಮಂದಿ ಇದ್ದಾರೆ. ಇವರ ಯೋಗಕ್ಷೇಮವನ್ನು ನಿತ್ಯವೂ ರೂಪಾ ಅವರು ನೋಡಿಕೊಳ್ಳುತ್ತಿದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT