ದುಬೈನಿಂದ ಇಂಡಿಗೋ ವಿಮಾನದಲ್ಲಿ ಮಾರ್ಚ್ 15ರಂದು ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಮರು ದಿವಸ ಕೊಡಗಿನ ಕೊಂಡಂಗೇರಿ ಗ್ರಾಮದ ಕೇತುಮೊಟ್ಟೆಯ ನಿವಾಸಕ್ಕೆ ಬಂದು ವಾಸ್ತವ್ಯ ಮಾಡಿದ್ದರು. ಮಾರ್ಚ್ 17ರಂದು ಕೊರೊನಾ ಲಕ್ಷಣ ಕಾಣಿಸಿಕೊಂಡು ತಾವೇ ಜಿಲ್ಲಾ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಪ್ರಕರಣ ದೃಢಪಟ್ಟ ಮೇಲೆ ವ್ಯಕ್ತಿ ವಾಸವಿದ್ದ ಕೊಂಡಂಗೇರಿ ಗ್ರಾಮಕ್ಕೆ ನಿರ್ಬಂಧ ಹೇರಲಾಗಿತ್ತು. ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿರುವುದು ಆತಂಕ ತಂದಿದೆ.