ಇಲ್ಲಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿ ಮುತ್ತಣ್ಣ ಸೇರಿದಂತೆ 20 ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸದೇ ಗ್ರಂಥಾಲಯದಲ್ಲಿ ಕೂರಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಬೇಸರಗೊಂಡ ಮುತ್ತಣ್ಣ ಎಂಬ ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ ಡಿ.1ರಂದು ಪ್ರಧಾನ ಮಂತ್ರಿ ಕಚೇರಿಗೆ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ಶಾಲೆಗೆ ತೆರಳಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮುತ್ತಣ್ಣನನ್ನು ಅಜ್ಜಿಯೊಂದಿಗೆ ತಮ್ಮ ಕಚೇರಿಗೆ ಕರೆಸಿಕೊಂಡು ಮಾಹಿತಿ ಪಡೆದುಕೊಂಡರು. ಶಾಲೆಯ ಪ್ರಾಂಶುಪಾಲರೊಂದಿಗೆ ಚರ್ಚಿಸಿದ ಬಳಿಕ ವಿದ್ಯಾರ್ಥಿಯನ್ನು ತರಗತಿಗೆ ಸೇರಿಸಲಾಗಿದೆ.