<p><em><strong>'ಕೊರೊನಾ ಭಯಪಡುವಂತಹ ಕಾಯಿಲೆ ಅಲ್ಲ' ಎನ್ನುವುದು ಕೊರೊನಾ ಗೆದ್ದು ಬಂದ ವಿರಾಜಪೇಟೆಯ<span style="color:#FF0000;">ಜಿಯಾ ಉಲ್ ಹುಸೇನ್ </span>ಅವರ ಮನದ ಮಾತು. ಈಚೆಗಷ್ಟೇ ಚಿಕಿತ್ಸೆ ಪಡೆದು ಗುಣಮುಖರಾದ ಅವರು ತಮ್ಮ ಮನದಮಾತು ಹಂಚಿಕೊಂಡ ಬಗೆಯಿದು.</strong></em></p>.<p class="rtecenter">---</p>.<p>ಕೊರೊನಾ ರಿಪೋರ್ಟ್ ಪಾಸಿಟಿವ್ ಬಂದಾಗ ಸಾಕಷ್ಟು ಭಯವುಂಟಾಗಿತ್ತು. ಆದರೆ, ನಂತರದ ದಿನಗಳಲ್ಲಿ ಭಯವೇ ಇರಲಿಲ್ಲ. ಭಯಪಡುವ ಅಗತ್ಯವೂ ಇಲ್ಲ. ಕೊರೊನಾ ಭಯಪಡುವಂತಹ ಕಾಯಿಲೆಯೂ ಅಲ್ಲ.</p>.<p>ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಾಗ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ಹೋದಾಗ, ಅಲ್ಲಿನ ವೈದ್ಯರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದರು.</p>.<p>ಬಳಿಕ, ಆರೋಗ್ಯ ಇಲಾಖೆಯ ತಂಡವು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿತು. ಮೂರ್ನಾಲ್ಕು ದಿನಗಳ ಬಳಿಕ ವರದಿ ಪಾಸಿಟಿವ್ ಬಂದಾಗ ಹೆದರಿಕೆಯಾಗಿತ್ತು. ನಂತರ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು. ಅಲ್ಲಿ ಮೊದಲ 5 ದಿನ ವಿಟಮಿನ್ ‘ಸಿ’ ಸೇರಿದಂತೆ ವಿವಿಧ ಔಷಧವನ್ನು ನೀಡಲಾಗುತ್ತಿತ್ತು.</p>.<p>ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಆಗಾಗ ಬಂದು ಪ್ರೀತಿಯಿಂದ ಆರೋಗ್ಯ ತಪಾಸಣೆ ಮಾಡುತ್ತಿದ್ದರು. ಇದರಿಂದ ಭಯದಿಂದ ಮುಕ್ತವಾಗಿ ಆರಾಮವಾಗಿ ಆಸ್ಪತ್ರೆಯಲ್ಲಿ ಇದ್ದೆ. ಬಿಸಿನೀರು ಹಾಗೂ ಹೊಟ್ಟೆತುಂಬಾ ಊಟ ಮಾಡಲು ಹೇಳುತ್ತಿದ್ದರು. ಆಹಾರದಲ್ಲಿ ಯಾವುದೇ ಪಥ್ಯವಿರಲಿಲ್ಲ.</p>.<p>ಕೇವಲ 5 ದಿನಗಳಲ್ಲಿ ನಾನು ಗುಣಮುಖನಾಗಿದ್ದೆ. 5 ದಿನಗಳ ಬಳಿಕ ನನ್ನನ್ನು 6 ದಿನಗಳ ಕಾಲ ವಸತಿ ಶಾಲೆಯೊಂದರಲ್ಲಿರಿಸಿ, ನಿಗಾ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಖಾಲಿ ಪ್ರದೇಶದಲ್ಲಿ ವಾಕಿಂಗ್ ಮಾಡುತ್ತಿದ್ದೆವು. ಬಳಿಕ ನಮ್ಮನ್ನು ಮನೆಗೆ ಕಳುಹಿಸಲಾಯಿತು. ವಿಟಮಿನ್ ‘ಸಿ’ ಮಾತ್ರೆಯನ್ನು ಕೆಲವು ದಿನಗಳವರೆಗೆ ಸೇವಿಸಲು ಸಲಹೆ ನೀಡಲಾಗಿದೆ. ಚಿಕಿತ್ಸೆಯ ಅವಧಿಯಲ್ಲಿ ಶುಚಿ– ರುಚಿಯಾದ ಉತ್ತಮ ಆಹಾರವನ್ನೇ ನಮಗೆ ನೀಡಲಾಗುತ್ತಿತ್ತು.</p>.<p>ಮನೆಗೆ ಹಿಂದಿರುಗಿದ ಸಂದರ್ಭ ಆತ್ಮೀಯ ಸ್ವಾಗತ ನೀಡಿದ ಪಟ್ಟಣದ ಶಾಂತಿನಗರ ನಿವಾಸಿಗಳು, ಸೀಲ್ಡೌನ್ ಸಂದರ್ಭದಲ್ಲೂ ನಮ್ಮ ಕುಟುಂಬಕ್ಕೆ ಸಾಕಷ್ಟು ಸಹಕಾರ ನೀಡಿರುವುದು ಸ್ಮರಣೀಯ. ಭಯ- ಆತಂಕ ದೂರ ಮಾಡಿ, ಆಗಾಗ ಬಿಸಿನೀರು ಹಾಗೂ ಆರೋಗ್ಯಕರವಾದ ಆಹಾರ ಸೇವಿಸಿದರೆ ಯಾವ ಸೋಂಕಿಗೂ ಭಯಪಡುವ ಅಗತ್ಯವಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em><strong>'ಕೊರೊನಾ ಭಯಪಡುವಂತಹ ಕಾಯಿಲೆ ಅಲ್ಲ' ಎನ್ನುವುದು ಕೊರೊನಾ ಗೆದ್ದು ಬಂದ ವಿರಾಜಪೇಟೆಯ<span style="color:#FF0000;">ಜಿಯಾ ಉಲ್ ಹುಸೇನ್ </span>ಅವರ ಮನದ ಮಾತು. ಈಚೆಗಷ್ಟೇ ಚಿಕಿತ್ಸೆ ಪಡೆದು ಗುಣಮುಖರಾದ ಅವರು ತಮ್ಮ ಮನದಮಾತು ಹಂಚಿಕೊಂಡ ಬಗೆಯಿದು.</strong></em></p>.<p class="rtecenter">---</p>.<p>ಕೊರೊನಾ ರಿಪೋರ್ಟ್ ಪಾಸಿಟಿವ್ ಬಂದಾಗ ಸಾಕಷ್ಟು ಭಯವುಂಟಾಗಿತ್ತು. ಆದರೆ, ನಂತರದ ದಿನಗಳಲ್ಲಿ ಭಯವೇ ಇರಲಿಲ್ಲ. ಭಯಪಡುವ ಅಗತ್ಯವೂ ಇಲ್ಲ. ಕೊರೊನಾ ಭಯಪಡುವಂತಹ ಕಾಯಿಲೆಯೂ ಅಲ್ಲ.</p>.<p>ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಾಗ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ಹೋದಾಗ, ಅಲ್ಲಿನ ವೈದ್ಯರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದರು.</p>.<p>ಬಳಿಕ, ಆರೋಗ್ಯ ಇಲಾಖೆಯ ತಂಡವು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿತು. ಮೂರ್ನಾಲ್ಕು ದಿನಗಳ ಬಳಿಕ ವರದಿ ಪಾಸಿಟಿವ್ ಬಂದಾಗ ಹೆದರಿಕೆಯಾಗಿತ್ತು. ನಂತರ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು. ಅಲ್ಲಿ ಮೊದಲ 5 ದಿನ ವಿಟಮಿನ್ ‘ಸಿ’ ಸೇರಿದಂತೆ ವಿವಿಧ ಔಷಧವನ್ನು ನೀಡಲಾಗುತ್ತಿತ್ತು.</p>.<p>ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಆಗಾಗ ಬಂದು ಪ್ರೀತಿಯಿಂದ ಆರೋಗ್ಯ ತಪಾಸಣೆ ಮಾಡುತ್ತಿದ್ದರು. ಇದರಿಂದ ಭಯದಿಂದ ಮುಕ್ತವಾಗಿ ಆರಾಮವಾಗಿ ಆಸ್ಪತ್ರೆಯಲ್ಲಿ ಇದ್ದೆ. ಬಿಸಿನೀರು ಹಾಗೂ ಹೊಟ್ಟೆತುಂಬಾ ಊಟ ಮಾಡಲು ಹೇಳುತ್ತಿದ್ದರು. ಆಹಾರದಲ್ಲಿ ಯಾವುದೇ ಪಥ್ಯವಿರಲಿಲ್ಲ.</p>.<p>ಕೇವಲ 5 ದಿನಗಳಲ್ಲಿ ನಾನು ಗುಣಮುಖನಾಗಿದ್ದೆ. 5 ದಿನಗಳ ಬಳಿಕ ನನ್ನನ್ನು 6 ದಿನಗಳ ಕಾಲ ವಸತಿ ಶಾಲೆಯೊಂದರಲ್ಲಿರಿಸಿ, ನಿಗಾ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಖಾಲಿ ಪ್ರದೇಶದಲ್ಲಿ ವಾಕಿಂಗ್ ಮಾಡುತ್ತಿದ್ದೆವು. ಬಳಿಕ ನಮ್ಮನ್ನು ಮನೆಗೆ ಕಳುಹಿಸಲಾಯಿತು. ವಿಟಮಿನ್ ‘ಸಿ’ ಮಾತ್ರೆಯನ್ನು ಕೆಲವು ದಿನಗಳವರೆಗೆ ಸೇವಿಸಲು ಸಲಹೆ ನೀಡಲಾಗಿದೆ. ಚಿಕಿತ್ಸೆಯ ಅವಧಿಯಲ್ಲಿ ಶುಚಿ– ರುಚಿಯಾದ ಉತ್ತಮ ಆಹಾರವನ್ನೇ ನಮಗೆ ನೀಡಲಾಗುತ್ತಿತ್ತು.</p>.<p>ಮನೆಗೆ ಹಿಂದಿರುಗಿದ ಸಂದರ್ಭ ಆತ್ಮೀಯ ಸ್ವಾಗತ ನೀಡಿದ ಪಟ್ಟಣದ ಶಾಂತಿನಗರ ನಿವಾಸಿಗಳು, ಸೀಲ್ಡೌನ್ ಸಂದರ್ಭದಲ್ಲೂ ನಮ್ಮ ಕುಟುಂಬಕ್ಕೆ ಸಾಕಷ್ಟು ಸಹಕಾರ ನೀಡಿರುವುದು ಸ್ಮರಣೀಯ. ಭಯ- ಆತಂಕ ದೂರ ಮಾಡಿ, ಆಗಾಗ ಬಿಸಿನೀರು ಹಾಗೂ ಆರೋಗ್ಯಕರವಾದ ಆಹಾರ ಸೇವಿಸಿದರೆ ಯಾವ ಸೋಂಕಿಗೂ ಭಯಪಡುವ ಅಗತ್ಯವಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>