<p><strong>ಸೋಮವಾರಪೇಟೆ</strong>: ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಮ್ಮ ಗ್ರಾಮಕ್ಕೂ ಅದರ ಪರಿಣಾಮ ಬೀರಬಾರದು ಎಂಬ ಉದ್ದೇಶದಿಂದ ತಾಲ್ಲೂಕಿನ ಎರಡು ಗ್ರಾಮಗಳು ತಾತ್ಕಾಲಿಕವಾಗಿ ಸಂಬಂಧ ಕಡಿತಗೊಳಿಸಿಕೊಂಡಿವೆ.</p>.<p>ನೇರಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸಗೋಡು ಗ್ರಾಮ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು-ಬೇಳೂರು ಗ್ರಾಮದೊಳಗೆ ಹೊರಗಿನವರು ಸಂಚರಿಸಬಾರದೆಂದು ಗ್ರಾಮ ಸಭೆಯಲ್ಲಿ ನಿರ್ಧರಿಸಿ ರಸ್ತೆಗೆ ಅಡ್ಡಲಾಗಿ ಬೇಲಿ ಹಾಕಿದ್ದಾರೆ.</p>.<p>ಗ್ರಾಮದವರು ಬೈಕ್ ನಲ್ಲಿ ಅವಶ್ಯಕವಿದ್ದಲ್ಲಿ ಮಾತ್ರ ಸಂಚರಿಸಬೇಕು. ಹೊರ ಜಿಲ್ಲೆ ಮತ್ತು ಹೊರದೇಶಗಳಲ್ಲಿರುವ ಗ್ರಾಮ ನಿವಾಸಿಗಳು ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡು ಗ್ರಾಮಕ್ಕೆ ಬರಬೇಕು. ಗ್ರಾಮಕ್ಕೆ ಸಂಬಂಧಪಡದವರು, ಗ್ರಾಮಾಧ್ಯಕ್ಷರ ಅನುಮತಿ ಪಡೆದು ಬರಬೇಕು ಎಂದು ಗ್ರಾಮ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.</p>.<p>ಮಸಗೋಡು ಗ್ರಾಮದಲ್ಲಿ ಸುಮಾರು 75 ಹಾಗೂ ಕುಸುಬೂರು ಗ್ರಾಮದಲ್ಲಿ 60 ಕುಟುಂಬಗಳಿವೆ. ಎಲ್ಲಾ ಕುಟುಂಬಗಳು ಕೃಷಿಕರಾಗಿದ್ದು, ಈಗಾಗಲೇ ಕಷ್ಟದ ಬದುಕನ್ನು ನಡೆಸುತ್ತಿರುವ ರೈತರಿಗೆ ಕರೋನ ವೈರಸ್ ನಿಂದ ಸಂಕಷ್ಟ ಎದುರಾಗಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ವೈರಸ್ ಹರಡಿದರೆ, ಜೀವ ಉಳಿಸಿಕೊಳ್ಳುವುದು ಕಷ್ಟಸಾಧ್ಯ. ಈ ಕಾರಣದಿಂದ ನಿರ್ಧಾರವನ್ನು ಕೈಗೊಂಡಿದ್ದೇವೆ ಎಂದು ಗ್ರಾಮದ ಪ್ರಮುಖರು ಹೇಳಿದರು.</p>.<p>ಕೊರೊನಾ ವಿರುದ್ಧ ಹೋರಾಟ ಮಾಡಲೇ ಬೇಕಾಗಿದೆ. ಸರ್ಕಾರದ ತುರ್ತು ಅದೇಶವನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗ್ರಾಮದವರೂ ಮನೆಯೊಳಗೆ ಇರುತ್ತೇವೆ. ಹೊರಗಿನಿಂದ ಊರುಗಳಿಂದ ಆಗಮಿಸಿದವರು ದಿನವಿಡಿ ಗ್ರಾಮದೊಳಗೆ ವಾಹನದಲ್ಲಿ ಸಂಚರಿಸುತ್ತಿದ್ದಾರೆ. ಯಾರಿಗೆ ವೈರಸ್ ಅಂಟಿರುವುದೋ ಗೊತ್ತಾಗುವುದಿಲ್ಲ. ಈ ಕಾರಣದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೊರ ರಾಜ್ಯ, ದೇಶಗಳಲ್ಲಿರುವ ಗ್ರಾಮದವರು, ಪರೀಕ್ಷೆ ಮಾಡಿಸಿಕೊಂಡು ಬರಬೇಕಾಗಿದೆ ಎಂದು ಗ್ರಾ.ಪಂ ಸದಸ್ಯ ಬೋಪಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಮ್ಮ ಗ್ರಾಮಕ್ಕೂ ಅದರ ಪರಿಣಾಮ ಬೀರಬಾರದು ಎಂಬ ಉದ್ದೇಶದಿಂದ ತಾಲ್ಲೂಕಿನ ಎರಡು ಗ್ರಾಮಗಳು ತಾತ್ಕಾಲಿಕವಾಗಿ ಸಂಬಂಧ ಕಡಿತಗೊಳಿಸಿಕೊಂಡಿವೆ.</p>.<p>ನೇರಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸಗೋಡು ಗ್ರಾಮ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು-ಬೇಳೂರು ಗ್ರಾಮದೊಳಗೆ ಹೊರಗಿನವರು ಸಂಚರಿಸಬಾರದೆಂದು ಗ್ರಾಮ ಸಭೆಯಲ್ಲಿ ನಿರ್ಧರಿಸಿ ರಸ್ತೆಗೆ ಅಡ್ಡಲಾಗಿ ಬೇಲಿ ಹಾಕಿದ್ದಾರೆ.</p>.<p>ಗ್ರಾಮದವರು ಬೈಕ್ ನಲ್ಲಿ ಅವಶ್ಯಕವಿದ್ದಲ್ಲಿ ಮಾತ್ರ ಸಂಚರಿಸಬೇಕು. ಹೊರ ಜಿಲ್ಲೆ ಮತ್ತು ಹೊರದೇಶಗಳಲ್ಲಿರುವ ಗ್ರಾಮ ನಿವಾಸಿಗಳು ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡು ಗ್ರಾಮಕ್ಕೆ ಬರಬೇಕು. ಗ್ರಾಮಕ್ಕೆ ಸಂಬಂಧಪಡದವರು, ಗ್ರಾಮಾಧ್ಯಕ್ಷರ ಅನುಮತಿ ಪಡೆದು ಬರಬೇಕು ಎಂದು ಗ್ರಾಮ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.</p>.<p>ಮಸಗೋಡು ಗ್ರಾಮದಲ್ಲಿ ಸುಮಾರು 75 ಹಾಗೂ ಕುಸುಬೂರು ಗ್ರಾಮದಲ್ಲಿ 60 ಕುಟುಂಬಗಳಿವೆ. ಎಲ್ಲಾ ಕುಟುಂಬಗಳು ಕೃಷಿಕರಾಗಿದ್ದು, ಈಗಾಗಲೇ ಕಷ್ಟದ ಬದುಕನ್ನು ನಡೆಸುತ್ತಿರುವ ರೈತರಿಗೆ ಕರೋನ ವೈರಸ್ ನಿಂದ ಸಂಕಷ್ಟ ಎದುರಾಗಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ವೈರಸ್ ಹರಡಿದರೆ, ಜೀವ ಉಳಿಸಿಕೊಳ್ಳುವುದು ಕಷ್ಟಸಾಧ್ಯ. ಈ ಕಾರಣದಿಂದ ನಿರ್ಧಾರವನ್ನು ಕೈಗೊಂಡಿದ್ದೇವೆ ಎಂದು ಗ್ರಾಮದ ಪ್ರಮುಖರು ಹೇಳಿದರು.</p>.<p>ಕೊರೊನಾ ವಿರುದ್ಧ ಹೋರಾಟ ಮಾಡಲೇ ಬೇಕಾಗಿದೆ. ಸರ್ಕಾರದ ತುರ್ತು ಅದೇಶವನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗ್ರಾಮದವರೂ ಮನೆಯೊಳಗೆ ಇರುತ್ತೇವೆ. ಹೊರಗಿನಿಂದ ಊರುಗಳಿಂದ ಆಗಮಿಸಿದವರು ದಿನವಿಡಿ ಗ್ರಾಮದೊಳಗೆ ವಾಹನದಲ್ಲಿ ಸಂಚರಿಸುತ್ತಿದ್ದಾರೆ. ಯಾರಿಗೆ ವೈರಸ್ ಅಂಟಿರುವುದೋ ಗೊತ್ತಾಗುವುದಿಲ್ಲ. ಈ ಕಾರಣದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೊರ ರಾಜ್ಯ, ದೇಶಗಳಲ್ಲಿರುವ ಗ್ರಾಮದವರು, ಪರೀಕ್ಷೆ ಮಾಡಿಸಿಕೊಂಡು ಬರಬೇಕಾಗಿದೆ ಎಂದು ಗ್ರಾ.ಪಂ ಸದಸ್ಯ ಬೋಪಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>