<p><strong>ಮಡಿಕೇರಿ</strong>: ಕೊರೊನಾದಿಂದ ಯುಗಾದಿ ಹಬ್ಬದ ಆಚರಣೆಯು ಕೊಡಗಿನಲ್ಲಿ ಕಳೆಗುಂದಿತ್ತು. ರಸ್ತೆಗಳೂ ಬಿಕೋ ಎನ್ನುತ್ತಿದ್ದವು. ಹಬ್ಬದ ವಾತಾವರಣ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಇರಲಿಲ್ಲ. ಹಬ್ಬದ ಮರು ದಿವಸವಾದ ಗುರುವಾರವೂ ಯಾರಲ್ಲೂ ಸಂಭ್ರಮ ಇರಲಿಲ್ಲ. ಎಲ್ಲರೂ ಮನೆಯಲ್ಲೇ ಉಳಿಯುವ ಪ್ರಯತ್ನ ಮಾಡಿದರು.</p>.<p>ಸಡಗರ, ಸಂಭ್ರಮದಿಂದ ಆಚರಿಸಬೇಕಾಗಿದ್ದ ಯುಗಾದಿ ಹಬ್ಬವನ್ನು ಗ್ರಾಮೀಣ ಪ್ರದೇಶದ ಜನರೂ ಸರಳವಾಗಿ ಆಚರಿಸಿದರು.</p>.<p>ಮನೆಗೇ ಬೆವಿನಸೊಪ್ಪು, ಮಾವಿನಸೊಪ್ಪಿನ ತೋರಣವನ್ನು ಕಟ್ಟಿ ಮನೆಯನ್ನು ಸಿಂಗರಿಸಲೂ ಮನಸ್ಸು ಇರಲಿಲ್ಲ.ಮನೆಯಲ್ಲಿಯೇ ದೇವರಿಗೆ ನಮಸ್ಕರಿಸಿ ಬೇವು ಬೆಲ್ಲವನ್ನು ತಿಂದು ಸರಳವಾಗಿ ಆಚರಿಸಿದರು.<br /><br /><strong>ಹಳ್ಳಿಗೆ ತರಕಾರಿ</strong></p>.<p>ಬೆಟ್ಟಗೇರಿ, ಅಪ್ಪಂಗಳ, ತಾಳತ್ತಮನೆ ಮತ್ತು ಭಾಗಮಂಡಲ ರಸ್ತೆಯಲ್ಲಿ ತರಕಾರಿಗಳು ಗೂಡ್ಸ್ ವಾಹನ ಮೂಲಕ ರಸ್ತೆಗಳಿಗೆ ಇಳಿದವು. ಗ್ರಾಹಕರೂ ಕೂಡ ಮುನ್ನೆಚ್ಚರಿಕೆಯಿಂದ ತರಕಾರಿ ಕೊಂಡುಕೊಳ್ಳಲು ಮುಂದಾದರು.ಕೆಲವರು ಮಾಸ್ಕ್ ಧರಿಸದೆಯೇ ತರಕಾರಿ ಕೊಂಡರು. ಜಿಲ್ಲಾಡಳಿತ ಅಗತ್ಯ ವಸ್ತುಗಳ ಖರೀದಿಗೆ ಆರು ಗಂಟೆ ಮೀಸಲಿಟ್ಟಿದೆ.</p>.<p><strong>ತರಕಾರಿ, ದಿನಸಿಗೆ ಬೇಡಿಕೆ</strong></p>.<p>ಅಕ್ಕಿ, ಬೇಳೆ, ಎಣ್ಣೆ, ತರಕಾರಿ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳಿಗೆ ಜಿಲ್ಲೆಯಲ್ಲಿ ತೀವ್ರ ಬೇಡಿಕೆ ಸೃಷ್ಟಿಯಾಗಿದೆ. ಅಂಗಡಿ ಮುಂಗಟ್ಟುಗಳಲ್ಲಿ ವಸ್ತುಗಳ ಖರೀದಿಗೆ ಜನ ಮುಗಿಬಿದ್ದರು. ಸದ್ಯಕ್ಕೆ ಅಂಗಡಿಗಳಲ್ಲಿ ದಾಸ್ತಾನು ಇದೆ. ಇನ್ನೆೆರಡು ದಿನದಲ್ಲಿ ಅದು ಖಾಲಿಯಾಗಲಿದೆ. ಆ ಬಳಿಕ ಗ್ರಾಮೀಣ ಪ್ರದೇಶದಲ್ಲಿ ಸಂಕಷ್ಟ ಸೃಷ್ಟಿಯಾಗುವ ಎಲ್ಲ ಸಾಧ್ಯತೆಯಿದೆ.</p>.<p>ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೆಲವೆಡೆ ಸಾಮಗ್ರಿ ಖರೀದಿಸಿದ್ದು ಕಂಡುಬಂತು. ಇನ್ನು ಕೆಲವು ಕಡೆ ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು.<br />ಕೆಲವು ವರ್ತಕರು ದುಪ್ಪಟ್ಟು ಬೆಲೆಗೆ ಅಗತ್ಯ ವಸ್ತುಗಳನ್ನು ಮಾರಿದರು. ಅಂಗಡಿ ಮುಂದೆ ಒಂದು ಮೀಟರ್ಗೆ ಒಂದು ಬಾಕ್ಸ್ ಹಾಕಲಾಗಿತ್ತು.ನಗರದ ಸೂಪರ್ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನರು ಕಂಡುಬಂದರು. ಹಾಲು ಖರೀದಿಗೆ ಜನರ ಸಾಲು ಹೆಚ್ಚಿತ್ತು.</p>.<p><strong>12ರ ನಂತರ ಲಾಕ್ಡೌನ್</strong></p>.<p>ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12ರ ನಂತರ ಜಿಲ್ಲೆ ಲಾಕ್ಡೌನ್ ಆಯಿತು. ಪೊಲೀಸರು ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿದರು. ಕೆಲಕಾಲ ವಾಹನಗಳ ಸಂಚಾರ ಇದ್ದರೂ ಮಧ್ಯಾಹ್ನ 1 ಗಂಟೆಯ ನಂತರ ಕೊಡಗು ಸ್ತಬ್ಧವಾಯಿತು.</p>.<p><strong>353 ಮಂದಿ ಹೋಂ ಕ್ವಾರಂಟೈನ್</strong></p>.<p>ಕೋವಿಡ್-19 ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಟಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರಿಸಲಾಗಿದೆ.</p>.<p>ಬುಧವಾರ ಸಂಜೆಯವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 139, ವಿರಾಜಪೇಟೆ ತಾಲ್ಲೂಕಿನಲ್ಲಿ 114 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 109 ಜನರನ್ನು ಪತ್ತೆ ಹಚ್ಚಲಾಗಿದೆ.</p>.<p>ಈ ಪೈಕಿ 353 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆ ಮಾಡಲಾಗಿದೆ.</p>.<p>ಒಟ್ಟು 34 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢಪಟ್ಟಿದ್ದು, 10 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 23 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ 3 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊರೊನಾದಿಂದ ಯುಗಾದಿ ಹಬ್ಬದ ಆಚರಣೆಯು ಕೊಡಗಿನಲ್ಲಿ ಕಳೆಗುಂದಿತ್ತು. ರಸ್ತೆಗಳೂ ಬಿಕೋ ಎನ್ನುತ್ತಿದ್ದವು. ಹಬ್ಬದ ವಾತಾವರಣ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಇರಲಿಲ್ಲ. ಹಬ್ಬದ ಮರು ದಿವಸವಾದ ಗುರುವಾರವೂ ಯಾರಲ್ಲೂ ಸಂಭ್ರಮ ಇರಲಿಲ್ಲ. ಎಲ್ಲರೂ ಮನೆಯಲ್ಲೇ ಉಳಿಯುವ ಪ್ರಯತ್ನ ಮಾಡಿದರು.</p>.<p>ಸಡಗರ, ಸಂಭ್ರಮದಿಂದ ಆಚರಿಸಬೇಕಾಗಿದ್ದ ಯುಗಾದಿ ಹಬ್ಬವನ್ನು ಗ್ರಾಮೀಣ ಪ್ರದೇಶದ ಜನರೂ ಸರಳವಾಗಿ ಆಚರಿಸಿದರು.</p>.<p>ಮನೆಗೇ ಬೆವಿನಸೊಪ್ಪು, ಮಾವಿನಸೊಪ್ಪಿನ ತೋರಣವನ್ನು ಕಟ್ಟಿ ಮನೆಯನ್ನು ಸಿಂಗರಿಸಲೂ ಮನಸ್ಸು ಇರಲಿಲ್ಲ.ಮನೆಯಲ್ಲಿಯೇ ದೇವರಿಗೆ ನಮಸ್ಕರಿಸಿ ಬೇವು ಬೆಲ್ಲವನ್ನು ತಿಂದು ಸರಳವಾಗಿ ಆಚರಿಸಿದರು.<br /><br /><strong>ಹಳ್ಳಿಗೆ ತರಕಾರಿ</strong></p>.<p>ಬೆಟ್ಟಗೇರಿ, ಅಪ್ಪಂಗಳ, ತಾಳತ್ತಮನೆ ಮತ್ತು ಭಾಗಮಂಡಲ ರಸ್ತೆಯಲ್ಲಿ ತರಕಾರಿಗಳು ಗೂಡ್ಸ್ ವಾಹನ ಮೂಲಕ ರಸ್ತೆಗಳಿಗೆ ಇಳಿದವು. ಗ್ರಾಹಕರೂ ಕೂಡ ಮುನ್ನೆಚ್ಚರಿಕೆಯಿಂದ ತರಕಾರಿ ಕೊಂಡುಕೊಳ್ಳಲು ಮುಂದಾದರು.ಕೆಲವರು ಮಾಸ್ಕ್ ಧರಿಸದೆಯೇ ತರಕಾರಿ ಕೊಂಡರು. ಜಿಲ್ಲಾಡಳಿತ ಅಗತ್ಯ ವಸ್ತುಗಳ ಖರೀದಿಗೆ ಆರು ಗಂಟೆ ಮೀಸಲಿಟ್ಟಿದೆ.</p>.<p><strong>ತರಕಾರಿ, ದಿನಸಿಗೆ ಬೇಡಿಕೆ</strong></p>.<p>ಅಕ್ಕಿ, ಬೇಳೆ, ಎಣ್ಣೆ, ತರಕಾರಿ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳಿಗೆ ಜಿಲ್ಲೆಯಲ್ಲಿ ತೀವ್ರ ಬೇಡಿಕೆ ಸೃಷ್ಟಿಯಾಗಿದೆ. ಅಂಗಡಿ ಮುಂಗಟ್ಟುಗಳಲ್ಲಿ ವಸ್ತುಗಳ ಖರೀದಿಗೆ ಜನ ಮುಗಿಬಿದ್ದರು. ಸದ್ಯಕ್ಕೆ ಅಂಗಡಿಗಳಲ್ಲಿ ದಾಸ್ತಾನು ಇದೆ. ಇನ್ನೆೆರಡು ದಿನದಲ್ಲಿ ಅದು ಖಾಲಿಯಾಗಲಿದೆ. ಆ ಬಳಿಕ ಗ್ರಾಮೀಣ ಪ್ರದೇಶದಲ್ಲಿ ಸಂಕಷ್ಟ ಸೃಷ್ಟಿಯಾಗುವ ಎಲ್ಲ ಸಾಧ್ಯತೆಯಿದೆ.</p>.<p>ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೆಲವೆಡೆ ಸಾಮಗ್ರಿ ಖರೀದಿಸಿದ್ದು ಕಂಡುಬಂತು. ಇನ್ನು ಕೆಲವು ಕಡೆ ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು.<br />ಕೆಲವು ವರ್ತಕರು ದುಪ್ಪಟ್ಟು ಬೆಲೆಗೆ ಅಗತ್ಯ ವಸ್ತುಗಳನ್ನು ಮಾರಿದರು. ಅಂಗಡಿ ಮುಂದೆ ಒಂದು ಮೀಟರ್ಗೆ ಒಂದು ಬಾಕ್ಸ್ ಹಾಕಲಾಗಿತ್ತು.ನಗರದ ಸೂಪರ್ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನರು ಕಂಡುಬಂದರು. ಹಾಲು ಖರೀದಿಗೆ ಜನರ ಸಾಲು ಹೆಚ್ಚಿತ್ತು.</p>.<p><strong>12ರ ನಂತರ ಲಾಕ್ಡೌನ್</strong></p>.<p>ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12ರ ನಂತರ ಜಿಲ್ಲೆ ಲಾಕ್ಡೌನ್ ಆಯಿತು. ಪೊಲೀಸರು ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿದರು. ಕೆಲಕಾಲ ವಾಹನಗಳ ಸಂಚಾರ ಇದ್ದರೂ ಮಧ್ಯಾಹ್ನ 1 ಗಂಟೆಯ ನಂತರ ಕೊಡಗು ಸ್ತಬ್ಧವಾಯಿತು.</p>.<p><strong>353 ಮಂದಿ ಹೋಂ ಕ್ವಾರಂಟೈನ್</strong></p>.<p>ಕೋವಿಡ್-19 ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಟಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರಿಸಲಾಗಿದೆ.</p>.<p>ಬುಧವಾರ ಸಂಜೆಯವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 139, ವಿರಾಜಪೇಟೆ ತಾಲ್ಲೂಕಿನಲ್ಲಿ 114 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 109 ಜನರನ್ನು ಪತ್ತೆ ಹಚ್ಚಲಾಗಿದೆ.</p>.<p>ಈ ಪೈಕಿ 353 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆ ಮಾಡಲಾಗಿದೆ.</p>.<p>ಒಟ್ಟು 34 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢಪಟ್ಟಿದ್ದು, 10 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 23 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ 3 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>