<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿದ್ದು ಶುಕ್ರವಾರದಿಂದ ಲಾಕ್ಡೌನ್ ಸಡಿಲಿಕೆಯಾಗಲಿದೆ. ರಾಜ್ಯ ಸರ್ಕಾರವು ಜುಲೈ 19ರ ತನಕ ವಿನಾಯಿತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಜಿಲ್ಲಾಡಳಿತದಿಂದ ಶುಕ್ರವಾರ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.</p>.<p>ರಾಜ್ಯದ ಬೇರೆ ಎಲ್ಲ ಜಿಲ್ಲೆಗಳಲ್ಲೂ ಪಾಸಿಟಿವ್ ದರ ಇಳಿಕೆಯಾಗಿದ್ದರಿಂದ ಕಳೆದ ವಾರ ಲಾಕ್ಡೌನ್ ತೆರವು ಮಾಡಲಾಗಿತ್ತು. ಕೊಡಗಿನಲ್ಲಿ ಲಾಕ್ಡೌನ್ ಮುಂದುವರಿಸಲಾಗಿತ್ತು.</p>.<p>ಕೆಎಸ್ಆರ್ಟಿಸಿ ಬಸ್ ಸಂಚಾರ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ನೀಡುವ ನಿರೀಕ್ಷೆಯಿದೆ. ಸೋಮವಾರದಿಂದ ಶುಕ್ರವಾರದ ತನಕ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಈ ಸಮಯವು ರಾತ್ರಿ 8 ಗಂಟೆಯ ತನಕ ವಿಸ್ತರಣೆ ಆಗಲಿದೆ.</p>.<p>‘ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು, ಪ್ರವಾಸೋದ್ಯಮ ಚುಟುವಟಿಕೆಗೆ ಮುಕ್ತ ಅವಕಾಶ ನೀಡಬೇಕು’ ಎಂದು ಪ್ರವಾಸೋದ್ಯಮ ಅವಲಂಬಿತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿದ್ದು ಶುಕ್ರವಾರದಿಂದ ಲಾಕ್ಡೌನ್ ಸಡಿಲಿಕೆಯಾಗಲಿದೆ. ರಾಜ್ಯ ಸರ್ಕಾರವು ಜುಲೈ 19ರ ತನಕ ವಿನಾಯಿತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಜಿಲ್ಲಾಡಳಿತದಿಂದ ಶುಕ್ರವಾರ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.</p>.<p>ರಾಜ್ಯದ ಬೇರೆ ಎಲ್ಲ ಜಿಲ್ಲೆಗಳಲ್ಲೂ ಪಾಸಿಟಿವ್ ದರ ಇಳಿಕೆಯಾಗಿದ್ದರಿಂದ ಕಳೆದ ವಾರ ಲಾಕ್ಡೌನ್ ತೆರವು ಮಾಡಲಾಗಿತ್ತು. ಕೊಡಗಿನಲ್ಲಿ ಲಾಕ್ಡೌನ್ ಮುಂದುವರಿಸಲಾಗಿತ್ತು.</p>.<p>ಕೆಎಸ್ಆರ್ಟಿಸಿ ಬಸ್ ಸಂಚಾರ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ನೀಡುವ ನಿರೀಕ್ಷೆಯಿದೆ. ಸೋಮವಾರದಿಂದ ಶುಕ್ರವಾರದ ತನಕ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಈ ಸಮಯವು ರಾತ್ರಿ 8 ಗಂಟೆಯ ತನಕ ವಿಸ್ತರಣೆ ಆಗಲಿದೆ.</p>.<p>‘ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು, ಪ್ರವಾಸೋದ್ಯಮ ಚುಟುವಟಿಕೆಗೆ ಮುಕ್ತ ಅವಕಾಶ ನೀಡಬೇಕು’ ಎಂದು ಪ್ರವಾಸೋದ್ಯಮ ಅವಲಂಬಿತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>