ಒಬ್ಬರು ಮಾತ್ರ ಜಿಲ್ಲೆಯಲ್ಲಿ ವಾಸವಿದ್ದು ಅವರ 14 ದಿನಗಳ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ. ಆದರೂ, ಮುನ್ನೆಚ್ಚರಿಕಾ ಕ್ರಮವಾಗಿ ಅವರ ಮೇಲೆ ನಿಗಾ ವಹಿಸಲಾಗಿದೆ. ಜಿಲ್ಲೆ ಜನರು ಆತಂಕ ಪಡುವ ಅಗತ್ಯವಿಲ್ಲ. ದೆಹಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರು ಪರಿಶೀಲನೆ ವೇಳೆ ಬಿಟ್ಟು ಹೋಗಿದ್ದರೆ ಹತ್ತಿರದ ಆಸ್ಪತ್ರೆ ಭೇಟಿ ಮಾಡುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.