<p><strong>ಮಡಿಕೇರಿ:</strong> ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತಷ್ಟು ವ್ಯಾಪಿಸುತ್ತಿದ್ದು ಕೊಡಗು ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸಲಾಗುತ್ತಿದೆ.</p>.<p>ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆದು, ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೈಗೊಂಡ ಕೆಲವು ನಿರ್ಣಯಗಳು ಇಲ್ಲಿವೆ.</p>.<p>* ಬೆಳಿಗ್ಗೆ 6ರಿಂದ 8ರ ತನಕ ಹಾಲು, ದಿನಪತ್ರಿಕೆ ಖರೀದಿಸಲು ಸಾರ್ವಜನಿಕರಿಗೆ ಮತ್ತು ಮಾರಾಟ ಮಳಿಗೆ ತೆರೆಯಲು ವರ್ತಕರಿಗೆ ಸಮಯ ನಿಗದಿ ಮಾಡಲಾಗಿದೆ.</p>.<p>* ವಾರದ 3 ದಿನಗಳಲ್ಲಿ ಅಂದರೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಣ್ಣು–ಹಂಪಲುಗಳ ಖರೀದಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಈ ಸಮಯದಲ್ಲಿ ಮಾತ್ರ ಅಂಗಡಿ ಬಾಗಿಲು ತೆರೆಯಬೇಕು. ಈ ಹಿಂದೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ತನಕ ದಿನಸಿ ಖರೀದಿಗೆ ಅವಕಾಶ ನೀಡಲಾಗಿತ್ತು.</p>.<p>* ಮೀನು ಮತ್ತು ಮಾಂಸದ ಮಾರಾಟ ನಿಷೇಧಿಸಲಾಗಿದೆ. ಈ ಮೊದಲು ಮೀನು ಮಾರಾಟಕ್ಕೆ ಅವಕಾಶ ಇತ್ತು.</p>.<p>* ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಪ್ರತಿ ಮನೆಯಿಂದ ಒಬ್ಬ ಆರೋಗ್ಯವಂತ ವ್ಯಕ್ತಿ ಮಾತ್ರ ಆಗಮಿಸಬೇಕು.</p>.<p>* ವ್ಯಕ್ತಿಯಿಂದ ವ್ಯಕ್ತಿಗೆ ಕನಿಷ್ಠ 1 ಮೀಟರ್ ಅಂತರ ಕಾಯ್ದುಕೊಳ್ಳಬೇಕು.</p>.<p>* ಆಸ್ಪತ್ರೆ, ಕ್ಲಿನಿಕ್, ಫಾರ್ಮಸಿ, ಆಪ್ಟಿಕಲ್ ಸ್ಟೋರ್, ಡಯಾಗ್ನೋಸ್ಟಿಕ್ ಸೆಂಟರ್ ಒಳಗೊಂಡಂತೆ ಇತರೆ ಆರೋಗ್ಯ ಮತ್ತು ವೈದ್ಯಕೀಯ ಸಂಬಂಧಿತ ಅಂಗಡಿ ಮಳಿಗೆಗಳು, ಗೋದಾಮು, ಕಾರ್ಖಾನೆಗಳು ದಿನದ 24 ಗಂಟೆಗಳು ಕಾರ್ಯಾಚರಿಸಲು ವಿನಾಯಿತಿ ಇರುತ್ತದೆ.</p>.<p>* ದಿನದ 24 ಗಂಟೆಗಳಲ್ಲಿಯೂ ನಿಷೇಧಾಜ್ಞೆ ಜಾರಿಯಲ್ಲಿದ್ದು ಸಾರ್ವಜನಿಕರು ವಿನಾ ಕಾರಣ ತಿರುಗಾಡುವುದು, ಗುಂಪುಗೂಡುವುದು ಕಂಡುಬಂದರೆ ಕಾನೂನು ಕ್ರಮ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತಷ್ಟು ವ್ಯಾಪಿಸುತ್ತಿದ್ದು ಕೊಡಗು ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸಲಾಗುತ್ತಿದೆ.</p>.<p>ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆದು, ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೈಗೊಂಡ ಕೆಲವು ನಿರ್ಣಯಗಳು ಇಲ್ಲಿವೆ.</p>.<p>* ಬೆಳಿಗ್ಗೆ 6ರಿಂದ 8ರ ತನಕ ಹಾಲು, ದಿನಪತ್ರಿಕೆ ಖರೀದಿಸಲು ಸಾರ್ವಜನಿಕರಿಗೆ ಮತ್ತು ಮಾರಾಟ ಮಳಿಗೆ ತೆರೆಯಲು ವರ್ತಕರಿಗೆ ಸಮಯ ನಿಗದಿ ಮಾಡಲಾಗಿದೆ.</p>.<p>* ವಾರದ 3 ದಿನಗಳಲ್ಲಿ ಅಂದರೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಣ್ಣು–ಹಂಪಲುಗಳ ಖರೀದಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಈ ಸಮಯದಲ್ಲಿ ಮಾತ್ರ ಅಂಗಡಿ ಬಾಗಿಲು ತೆರೆಯಬೇಕು. ಈ ಹಿಂದೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ತನಕ ದಿನಸಿ ಖರೀದಿಗೆ ಅವಕಾಶ ನೀಡಲಾಗಿತ್ತು.</p>.<p>* ಮೀನು ಮತ್ತು ಮಾಂಸದ ಮಾರಾಟ ನಿಷೇಧಿಸಲಾಗಿದೆ. ಈ ಮೊದಲು ಮೀನು ಮಾರಾಟಕ್ಕೆ ಅವಕಾಶ ಇತ್ತು.</p>.<p>* ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಪ್ರತಿ ಮನೆಯಿಂದ ಒಬ್ಬ ಆರೋಗ್ಯವಂತ ವ್ಯಕ್ತಿ ಮಾತ್ರ ಆಗಮಿಸಬೇಕು.</p>.<p>* ವ್ಯಕ್ತಿಯಿಂದ ವ್ಯಕ್ತಿಗೆ ಕನಿಷ್ಠ 1 ಮೀಟರ್ ಅಂತರ ಕಾಯ್ದುಕೊಳ್ಳಬೇಕು.</p>.<p>* ಆಸ್ಪತ್ರೆ, ಕ್ಲಿನಿಕ್, ಫಾರ್ಮಸಿ, ಆಪ್ಟಿಕಲ್ ಸ್ಟೋರ್, ಡಯಾಗ್ನೋಸ್ಟಿಕ್ ಸೆಂಟರ್ ಒಳಗೊಂಡಂತೆ ಇತರೆ ಆರೋಗ್ಯ ಮತ್ತು ವೈದ್ಯಕೀಯ ಸಂಬಂಧಿತ ಅಂಗಡಿ ಮಳಿಗೆಗಳು, ಗೋದಾಮು, ಕಾರ್ಖಾನೆಗಳು ದಿನದ 24 ಗಂಟೆಗಳು ಕಾರ್ಯಾಚರಿಸಲು ವಿನಾಯಿತಿ ಇರುತ್ತದೆ.</p>.<p>* ದಿನದ 24 ಗಂಟೆಗಳಲ್ಲಿಯೂ ನಿಷೇಧಾಜ್ಞೆ ಜಾರಿಯಲ್ಲಿದ್ದು ಸಾರ್ವಜನಿಕರು ವಿನಾ ಕಾರಣ ತಿರುಗಾಡುವುದು, ಗುಂಪುಗೂಡುವುದು ಕಂಡುಬಂದರೆ ಕಾನೂನು ಕ್ರಮ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>