ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ವೆಂಕಟೇಶ್ ‘ಮೂವರು ಕೋವಿಡ್ ರೋಗಿಗಳು ಸದ್ಯ ಆಸ್ಪತ್ರೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕಪಡುವ ಅಗತ್ಯ ಇಲ್ಲ. ಇವರ ಗಂಟಲು ದ್ರವದ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಒಂದು ವಾರದ ಬಳಿಕ ವರದಿ ಬರಲಿದ್ದು, ಕೊರೊನಾ ವೈರಸ್ನ ತಳಿ ಯಾವುದು ಎಂಬುದು ಗೊತ್ತಾಗಲಿದೆ. ಸದ್ಯ, ಕೊಡಗು ಜಿಲ್ಲೆಯಲ್ಲಿ ಆತಂಕಪಡುವ ಅಗತ್ಯ ಇಲ್ಲ’ ಎಂದು ಹೇಳಿದರು.