<p><strong>ಕುಶಾಲನಗರ:</strong> ನಂಜರಾಯಪಟ್ಟಣ ಗ್ರಾಮಪಂಚಾಯಿತಿ ವ್ಯಾಪ್ತಿಯ ಪ್ರಮುಖ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರದಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಕೊರೊನಾ ರೂಪಾಂತರಿ ಜೆಎನ್.1 ಬಗ್ಗೆ ಜಾಗೃತಿ ಮೂಡಿಸುವುದು, ನಿಯಂತ್ರಣ ಕ್ರಮ ಹೆಚ್ಚಿಸಬೇಕು ಎಂದು ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದರು.</p>.<p>ಈಚೆಗೆ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿ ನಿರಂತರ ಕಾಡಾನೆ, ಹುಲಿ ಹಾವಳಿ ಇದೆ. ಅರಣ್ಯ ಇಲಾಖೆ ಎಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗೆ ಸೂಚಿಸಿದರು. ಕಾಡಾನೆ ಹಾವಳಿ ತಡೆಗಟ್ಟಲು ಅಳವಡಿಸಿದ್ದ ರೈಲ್ವೇ ಬ್ಯಾರಿಕೇಡ್ ಹಲವು ಕಡೆ ಹಾನಿಯಾಗಿದೆ, ಸೋಲಾರ್ ಬೇಲಿ ಸ್ಥಾಪಿಸುವ ಬಗ್ಗೆ ಗಮನಹರಿಸಬೇಕು ಎಂದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿ ನಿವಾಸಿಗಳಿಗೆ ಸೆಸ್ಕ್ನಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಬೇಕಿದೆ. ಜಂಗಲ್ ಕಟ್ಟಿಂಗ್ ಮೂಲಕ ಸಂಭಾವ್ಯ ವಿದ್ಯುತ್ ಅವಘಡ ತಪ್ಪಿಸಲು ಸೂಚಿಸಿದರು.<br><br> ಜಾನುವಾರುಗಳ ಚಿಕಿತ್ಸೆ, ಸ್ಮಶಾನ, ಕೆರೆಗಳಿಗೆ ದಾರಿ ಸಮಸ್ಯೆ, ಮಳೆಹಾನಿ ಪರಿಹಾರ ಧನ ವಿಳಂಬ, ವೈರಸ್ ಹಾವಳಿ ತಡೆ ಕ್ರಮಗಳ ಬಗ್ಗೆ, ಪಡಿತರ ಚೀಟಿ, ಗೃಹಲಕ್ಷ್ಮಿ ಯೋಜನೆ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.</p>.<p>ವಿವಿಧ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಸಿಗುವ ಜನರಿಗೆ ಸೌಲಭ್ಯಗಳ ಮಾಹಿತಿ ನೀಡಿದರು. ಅಭಿವೃದ್ಧಿ ಕಾರ್ಯಗಳ ಬಗ್ಗೆ ಸದಸ್ಯರು ಚರ್ಚಿಸಿದರು. ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಸಮೀರ, ಮಾವಾಜಿ ರಕ್ಷಿತ್, ಜಾಜಿ ತಮ್ಮಯ್ಯ ಪಿಡಿಒ ರಾಜಶೇಖರ್, ಕಾರ್ಯದರ್ಶಿ ಶೇಷಗಿರಿ ಭಾಗವಹಿಸಿದ್ದರು.</p>.<p> <strong>‘ತಾತ್ಕಾಲಿಕ ಸೇತುವೆ ಬೋಟ್’:</strong></p><p>ದುಬಾರೆಯಲ್ಲಿ ತೂಗುಸೇತುವೆಯಿಲ್ಲದೆ ನದಿ ದಾಟುವ ಪ್ರವಾಸಿಗರ ಜೀವಕ್ಕೆ ಸುರಕ್ಷತೆಯಿಲ್ಲದಂತಾಗಿದೆ. ತೂಗುಸೇತುವೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಮನಸ್ಸು ಮಾಡುತ್ತಿಲ್ಲ. ಪಂಚಾಯಿತಿ ವತಿಯಿಂದ ಪಾರ್ಕಿಂಗ್ ಶೌಚಾಲಯ ಮತ್ತಿತರ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಲಾಗಿದೆ. ನದಿ ದಾಟುವ ಪ್ರವಾಸಿಗರ ಕಾಲು ಜಾರಿ ಬಿದ್ದು ಹಾನಿ ಮಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ಪ್ರವಾಸಿಗರು ಸಾರ್ವಜನಿಕರು ಗ್ರಾಪಂ ಮೇಲೆ ಆರೋಪ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಗಮನಹರಿಸಿ ತೂಗುಸೇತುವೆ ನಿರ್ಮಾಣ ಮಾಡುವವರೆಗೆ ಪರ್ಯಾಯ ತಾತ್ಕಾಲಿಕ ಸೇತುವೆ ವ್ಯವಸ್ಥೆ ಕಲ್ಪಿಸಬೇಕು. ಎರಡು ಮೋಟಾರ್ ಬೋಟ್ ಖರೀದಿಗೆ ಪಂಚಾಯಿತಿ ತೀರ್ಮಾನಿಸಿದೆ ಎಂದು ಅಧ್ಯಕ್ಷ ವಿಶ್ವ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ನಂಜರಾಯಪಟ್ಟಣ ಗ್ರಾಮಪಂಚಾಯಿತಿ ವ್ಯಾಪ್ತಿಯ ಪ್ರಮುಖ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರದಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಕೊರೊನಾ ರೂಪಾಂತರಿ ಜೆಎನ್.1 ಬಗ್ಗೆ ಜಾಗೃತಿ ಮೂಡಿಸುವುದು, ನಿಯಂತ್ರಣ ಕ್ರಮ ಹೆಚ್ಚಿಸಬೇಕು ಎಂದು ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದರು.</p>.<p>ಈಚೆಗೆ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿ ನಿರಂತರ ಕಾಡಾನೆ, ಹುಲಿ ಹಾವಳಿ ಇದೆ. ಅರಣ್ಯ ಇಲಾಖೆ ಎಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗೆ ಸೂಚಿಸಿದರು. ಕಾಡಾನೆ ಹಾವಳಿ ತಡೆಗಟ್ಟಲು ಅಳವಡಿಸಿದ್ದ ರೈಲ್ವೇ ಬ್ಯಾರಿಕೇಡ್ ಹಲವು ಕಡೆ ಹಾನಿಯಾಗಿದೆ, ಸೋಲಾರ್ ಬೇಲಿ ಸ್ಥಾಪಿಸುವ ಬಗ್ಗೆ ಗಮನಹರಿಸಬೇಕು ಎಂದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿ ನಿವಾಸಿಗಳಿಗೆ ಸೆಸ್ಕ್ನಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಬೇಕಿದೆ. ಜಂಗಲ್ ಕಟ್ಟಿಂಗ್ ಮೂಲಕ ಸಂಭಾವ್ಯ ವಿದ್ಯುತ್ ಅವಘಡ ತಪ್ಪಿಸಲು ಸೂಚಿಸಿದರು.<br><br> ಜಾನುವಾರುಗಳ ಚಿಕಿತ್ಸೆ, ಸ್ಮಶಾನ, ಕೆರೆಗಳಿಗೆ ದಾರಿ ಸಮಸ್ಯೆ, ಮಳೆಹಾನಿ ಪರಿಹಾರ ಧನ ವಿಳಂಬ, ವೈರಸ್ ಹಾವಳಿ ತಡೆ ಕ್ರಮಗಳ ಬಗ್ಗೆ, ಪಡಿತರ ಚೀಟಿ, ಗೃಹಲಕ್ಷ್ಮಿ ಯೋಜನೆ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.</p>.<p>ವಿವಿಧ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಸಿಗುವ ಜನರಿಗೆ ಸೌಲಭ್ಯಗಳ ಮಾಹಿತಿ ನೀಡಿದರು. ಅಭಿವೃದ್ಧಿ ಕಾರ್ಯಗಳ ಬಗ್ಗೆ ಸದಸ್ಯರು ಚರ್ಚಿಸಿದರು. ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಸಮೀರ, ಮಾವಾಜಿ ರಕ್ಷಿತ್, ಜಾಜಿ ತಮ್ಮಯ್ಯ ಪಿಡಿಒ ರಾಜಶೇಖರ್, ಕಾರ್ಯದರ್ಶಿ ಶೇಷಗಿರಿ ಭಾಗವಹಿಸಿದ್ದರು.</p>.<p> <strong>‘ತಾತ್ಕಾಲಿಕ ಸೇತುವೆ ಬೋಟ್’:</strong></p><p>ದುಬಾರೆಯಲ್ಲಿ ತೂಗುಸೇತುವೆಯಿಲ್ಲದೆ ನದಿ ದಾಟುವ ಪ್ರವಾಸಿಗರ ಜೀವಕ್ಕೆ ಸುರಕ್ಷತೆಯಿಲ್ಲದಂತಾಗಿದೆ. ತೂಗುಸೇತುವೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಮನಸ್ಸು ಮಾಡುತ್ತಿಲ್ಲ. ಪಂಚಾಯಿತಿ ವತಿಯಿಂದ ಪಾರ್ಕಿಂಗ್ ಶೌಚಾಲಯ ಮತ್ತಿತರ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಲಾಗಿದೆ. ನದಿ ದಾಟುವ ಪ್ರವಾಸಿಗರ ಕಾಲು ಜಾರಿ ಬಿದ್ದು ಹಾನಿ ಮಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ಪ್ರವಾಸಿಗರು ಸಾರ್ವಜನಿಕರು ಗ್ರಾಪಂ ಮೇಲೆ ಆರೋಪ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಗಮನಹರಿಸಿ ತೂಗುಸೇತುವೆ ನಿರ್ಮಾಣ ಮಾಡುವವರೆಗೆ ಪರ್ಯಾಯ ತಾತ್ಕಾಲಿಕ ಸೇತುವೆ ವ್ಯವಸ್ಥೆ ಕಲ್ಪಿಸಬೇಕು. ಎರಡು ಮೋಟಾರ್ ಬೋಟ್ ಖರೀದಿಗೆ ಪಂಚಾಯಿತಿ ತೀರ್ಮಾನಿಸಿದೆ ಎಂದು ಅಧ್ಯಕ್ಷ ವಿಶ್ವ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>