ಘಟ್ಟದಳ ನಿವಾಸಿ ಜಯಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಮೇಯಲು ಬಿಡಲಾಗಿತ್ತು. ಬುಧವಾರ ಮದ್ಯಾಹ್ನದ ಬಳಿಕ ಹುಲಿ ದಾಳಿ ನಡೆಸಿ ಕೊಂದಿದೆ. ಒಂದು ದಿನದ ಹಿಂದೆಯಷ್ಟೆ ಜಯಚಂದ್ರ ಅವರ ಹಾಲು ಕರೆಯುವ ಹಸು ಹುಲಿ ದಾಳಿಗೆ ಬಲಿಯಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಾಗಿ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲೇ ಹುಲಿ ಹಸುವಿನ ಮೇಲೆ ದಾಳಿ ನಡೆಸಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.