ಗುಡ್ಡದ ಮಣ್ಣನ್ನು ತೆರವುಗೊಳಿಸಬೇಕೇ, ಬೇಡವೇ, ತೆರವುಗೊಳಿಸುವುದರಿಂದ ಆಗುವ ಪರಿಣಾಮಗಳನ್ನು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿದಂತೆ ಯಾರಲ್ಲೂ ಖಚಿತ ಅಭಿಪ್ರಾಯಗಳಿಲ್ಲ. ಹಾಗಾಗಿ, ತಜ್ಞರ ಸಲಹೆ ಇಲ್ಲದೇ ತರಾತುರಿಯಲ್ಲಿ ಗುಡ್ಡದ ಮಣ್ಣನ್ನು ತೆರವುಗೊಳಿಸುವುದು ಬೇಡ ಎಂಬ ತೀರ್ಮಾನಕ್ಕೆ ಜಿಲ್ಲಾಡಳಿತ ಬಂದಿದೆ.