ಪಂದ್ಯ ಆರಂಭವಾದ ಕ್ಷಣದಿಂದ ಮುಗಿಯುವ ತನಕ ಟಿ.ವಿಯಲ್ಲಿ ಆಸಕ್ತಿಯಿಂದ ವೀಕ್ಷಿಸುತ್ತಿದ್ದರು. ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದ ಹತ್ತು ನಿಮಿಷದಲ್ಲಿಯೇ ಅವರಿಗೆ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕುಟುಂಬದವರು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಮೃತಪಟ್ಟಿದ್ದರು. ಇವರು ಕಾಫಿ ಬೆಳೆಗಾರರಾಗಿದ್ದರು.