<p><strong>ವಿರಾಜಪೇಟೆ:</strong> ಸಮೀಪದ ಕದನೂರು ಗ್ರಾಮದ ಭಗವತಿ ದೇವಾಲಯದಲ್ಲಿ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾದ ಪಟ್ಟಣದ ಟಿ.ಕಾರ್ತಿಕ್ ಬಂಧಿತ ಆರೋಪಿ. ಈತ ಕಳವು ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿ, ಅನುಭವಿಸಿ ಜೈಲಿನಿಂದ ಹೊರಬಂದ ದಿನವೇ ಮತ್ತೆ ತನ್ನ ಕೈಚಳಕ ತೋರಿದ್ದನು.</p>.<p>ಮಾರ್ಚ್ 19 ರಂದು ರಾತ್ರಿ ಕದನೂರು ಗ್ರಾಮದ ಭಗವತಿ ದೇವಾಲಯದ ಭಂಡಾರವನ್ನು ಕಬ್ಬಿಣದ ಸಲಾಕೆಯಿಂದ ಒಡೆದು ಕಳ್ಳತನ ಮಾಡಲಾಗಿದೆ ಎಂದು ದೇವಾಲದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಕೆ. ಪ್ರಶಾಂತ್ ಅವರು ವಿರಾಜಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿ ಸಂಶಯದ ಮೇಲೆ ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಈ ಹಿಂದೆ ಅಮ್ಮತ್ತಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಜೈಲುವಾಸ ಅನುಭವಿಸಿ ಮಾರ್ಚ್ 19 ರ ಬೆಳಿಗ್ಗೆಯಷ್ಟೇ ಜೈಲಿನಿಂದ ಬಿಡುಗಡೆಯಗಿ ಬಂದಿದ್ದ ಎಂದು ತಿಳಿದುಬಂದಿದೆ. ಅದೇ ದಿನ ರಾತ್ರಿ ಮತ್ತೊಂದು ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವುದು ಅಚ್ಚರಿ ಮೂಡಿಸಿದೆ.</p>.<p>ಪೊಲೀಸರು ಆರೋಪಿಯಿಂದ ಮೊಬೈಲ್ ಫೋನ್ ಹಾಗೂ ₹ 700 ನಗದು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.<br /><br />ಡಿವೈಎಸ್ಪಿ ಸಿ.ಟಿ. ಜಯಕುಮಾರ್ ಹಾಗೂ ಸಿಪಿಐ ಶ್ರೀಧರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಸಿದ್ದಲಿಂಗ ಬಾಣಸೆ, ಎ.ಎಸ್.ಐ. ಶ್ರೀಧರ್, ಸಿಬ್ಬಂದಿ ತೀರ್ಥಕುಮಾರ್, ನೆಹರುಕುಮಾರ್ ಹಾಗೂ ಪ್ರದೀಪ್ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಸಮೀಪದ ಕದನೂರು ಗ್ರಾಮದ ಭಗವತಿ ದೇವಾಲಯದಲ್ಲಿ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾದ ಪಟ್ಟಣದ ಟಿ.ಕಾರ್ತಿಕ್ ಬಂಧಿತ ಆರೋಪಿ. ಈತ ಕಳವು ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿ, ಅನುಭವಿಸಿ ಜೈಲಿನಿಂದ ಹೊರಬಂದ ದಿನವೇ ಮತ್ತೆ ತನ್ನ ಕೈಚಳಕ ತೋರಿದ್ದನು.</p>.<p>ಮಾರ್ಚ್ 19 ರಂದು ರಾತ್ರಿ ಕದನೂರು ಗ್ರಾಮದ ಭಗವತಿ ದೇವಾಲಯದ ಭಂಡಾರವನ್ನು ಕಬ್ಬಿಣದ ಸಲಾಕೆಯಿಂದ ಒಡೆದು ಕಳ್ಳತನ ಮಾಡಲಾಗಿದೆ ಎಂದು ದೇವಾಲದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಕೆ. ಪ್ರಶಾಂತ್ ಅವರು ವಿರಾಜಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿ ಸಂಶಯದ ಮೇಲೆ ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಈ ಹಿಂದೆ ಅಮ್ಮತ್ತಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಜೈಲುವಾಸ ಅನುಭವಿಸಿ ಮಾರ್ಚ್ 19 ರ ಬೆಳಿಗ್ಗೆಯಷ್ಟೇ ಜೈಲಿನಿಂದ ಬಿಡುಗಡೆಯಗಿ ಬಂದಿದ್ದ ಎಂದು ತಿಳಿದುಬಂದಿದೆ. ಅದೇ ದಿನ ರಾತ್ರಿ ಮತ್ತೊಂದು ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವುದು ಅಚ್ಚರಿ ಮೂಡಿಸಿದೆ.</p>.<p>ಪೊಲೀಸರು ಆರೋಪಿಯಿಂದ ಮೊಬೈಲ್ ಫೋನ್ ಹಾಗೂ ₹ 700 ನಗದು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.<br /><br />ಡಿವೈಎಸ್ಪಿ ಸಿ.ಟಿ. ಜಯಕುಮಾರ್ ಹಾಗೂ ಸಿಪಿಐ ಶ್ರೀಧರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಸಿದ್ದಲಿಂಗ ಬಾಣಸೆ, ಎ.ಎಸ್.ಐ. ಶ್ರೀಧರ್, ಸಿಬ್ಬಂದಿ ತೀರ್ಥಕುಮಾರ್, ನೆಹರುಕುಮಾರ್ ಹಾಗೂ ಪ್ರದೀಪ್ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>