ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆ.24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ. ಐವರು ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ.
ಈ ಮೂಲಕ ಆ.26ರಂದು ಕಾಂಗ್ರೆಸ್ ಕರೆ ನೀಡಿದ್ದ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿ ಆಯೋಜಿಸಿದ್ದ ‘ಜನಜಾಗೃತಿ ಸಮಾವೇಶ’ಗಳಿಗೆ ಅನುಮತಿ ನಿರಾಕರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.