<p><strong>ಮಡಿಕೇರಿ: </strong>ಮಡಿಕೇರಿ ದಸರಾವನ್ನು ಈ ಬಾರಿ ವೈಭವಯುತ ಹಾಗೂ ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗುತ್ತಿದೆ. ಸೆ. 29ರಂದು ನಡೆಯುವ ನಾಲ್ಕು ಶಕ್ತಿ ದೇವತೆಗಳ ‘ಕರಗೋತ್ಸವ’ಕ್ಕೆ ದೇವಾಲಯ ಸಮಿತಿ ಹಾಗೂ ಕರಗ ಸಮಿತಿ ಸಿದ್ಧತೆ ಮಾಡಿಕೊಳ್ಳಲಾಗಿದೆ.</p>.<p>29ರಂದು ನಗರದ ಪಂಪಿನಕೆರೆಯಲ್ಲಿ ನಾಲ್ಕು ಶಕ್ತಿ ದೇವತೆಗಳಾದ ಕಂಚಿ ಕಾಮಾಕ್ಷಿಯಮ್ಮ, ಕೋಟೆ ಮಾರಿಯಮ್ಮ, ಕುಂದೂರು ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮನ ದೇವಾಲಯಗಳ ಆಯಾ ಸಮಿತಿ ಕರಗೋತ್ಸವವನ್ನು ಆರಂಭಿಸಲಾಗುತ್ತಿದೆ. ಈ ಬಾರಿ ಒಟ್ಟಾಗಿ ಕರಗ ಹೊರಡುವುದು ವಿಶೇಷ.</p>.<p>ಕರಗವು ಸೆ. 30ರಿಂದ ಅ.3ರವರೆಗೆ ಕರಗಗಳು ಸಂಪ್ರದಾಯದಂತೆ ನಗರ ಪ್ರದಕ್ಷಿಣೆ ಮಾಡಲಿದ್ದು ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ಮಡಿಕೇರಿ ರಾಜಬೀದಿಯಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ.</p>.<p>29ರಂದು ಮಧ್ಯಾಹ್ನ 2ಕ್ಕೆ ಕರಗಗಳನ್ನು ಶೃಂಗರಿಸಲು ಪಂಪಿನಕೆರೆಗೆ ಒಟ್ಟಾಗಿ ದೇವಾಲಯಗಳಿಂದ ಕರಗ ಕೊಂಡೊಯ್ಯಲಾಗುವುದು ಎಂದು ನಗರದ ಕಂಚಿಕಾಮಾಕ್ಷಿ ದೇವಾಲಯ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಕರಗ ಸಿದ್ಧತೆಯ ನಂತರ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಸಂಜೆ 6ರ ನಂತರ ಪಂಪಿನ ಕೆರೆಯಿಂದ ಮೆರವಣಿಗೆ ಆರಂಭವಾಗಲಿದೆ. ಕಂಚಿಕಾಮಾಕ್ಷಿಯಮ್ಮ ದೇವಾಲಯದ ಮಹಿಳಾ ಸದಸ್ಯರು ಈ ಬಾರಿ ಕಲಶಗಳೊಂದಿಗೆ ನಾಲ್ಕು ಶಕ್ತಿ ದೇವತೆಗಳ ಕರಗಗಳನ್ನು ಬರ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.</p>.<p>ಸಂಜೆ ಪಂಪಿನ ಕೆರೆಯಿಂದ ಹೊರಡುವ ಕರಗಗಳು ಭಕ್ತರಿಂದ ಪೂಜೆ ಸ್ವೀಕರಿಸಿಕೊಂಡು ಶ್ರೀಬಸವೇಶ್ವರ, ಚೌಡೇಶ್ವರಿ, ಕೋದಂಡರಾಮ ಹಾಗೂ ಕನ್ನಿಕಾ ಪರಮೇಶ್ವರಿ ದೇವಾಲಯಗಳಿಗೆ ತೆರಳಿ ಪೇಟೆ ರಾಮ ಮಂದಿರಕ್ಕೆ ಸೇರಲಿವೆ. ಅಲ್ಲಿಂದ ಕರಗಗಳು ತಮ್ಮ ತಮ್ಮ ದೇವಾಲಯಗಳಿಗೆ ತೆರಳಲಿವೆ ಎಂದರು.</p>.<p>ಕೋಟೆ ಮಾರಿಯಮ್ಮ ದೇವಾಲಯ ಪ್ರಧಾನ ಅರ್ಚಕ ಉಮೇಶ್ ಸುಬ್ರಮಣಿ ಮಾತನಾಡಿ, 4 ಕರಗಗಳು ಒಟ್ಟಾಗಿ ನಗರ ಪ್ರದಕ್ಷಿಣೆ ಮಾಡುತ್ತವೆ. ಬನ್ನಿಮಂಟಪದವರೆಗೆ ತೆರಳಿ ಅ. 9ರಂದು ಬೆಳಗಿನ ಜಾವ ಬನ್ನಿ ಮಂಟಪದಲ್ಲಿ ‘ಬನ್ನಿ’ ಕಡಿಯಲಾಗುವುದು ಎಂದು ತಿಳಿಸಿದರು.</p>.<p class="Subhead"><strong>225 ವರ್ಷಗಳ ಇತಿಹಾಸ:</strong>ದಸರಾ ಉತ್ಸವ ಕರಗಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತ ಬರುತ್ತಿದೆ. ಆಗಿನ ಕಾಲದಿಂದಲೂ ಮಡಿಕೇರಿಯಲ್ಲಿ ನೆಲೆಸಿರುವ ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವನ್ನು ಆರಾಧಿಸಿಕೊಂಡು ಬರುತ್ತಿರುವುದು ಐತಿಹಾಸಿಕ ದಸರಾ ಉತ್ಸವದ ವಿಶೇಷ.</p>.<p>ಪತ್ರಿಕಾಗೋಷ್ಠಿಯಲ್ಲಿ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಪ್ರಧಾನ ಅರ್ಚಕ ವಿ.ಪಿ.ಚಾಮಿ, ಅರ್ಚಕ ಬಾಲಕೃಷ್ಣ, ದಂಡಿನ ಮಾರಿಯಮ್ಮ ದೇವಾಲಯ ಅರ್ಚಕ ಉಮೇಶ್, ಕಂಚಿ ಕಾಮಾಕ್ಷಿ ದೇವಾಲಯ ಅರ್ಚಕ ನವೀನ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಮಡಿಕೇರಿ ದಸರಾವನ್ನು ಈ ಬಾರಿ ವೈಭವಯುತ ಹಾಗೂ ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗುತ್ತಿದೆ. ಸೆ. 29ರಂದು ನಡೆಯುವ ನಾಲ್ಕು ಶಕ್ತಿ ದೇವತೆಗಳ ‘ಕರಗೋತ್ಸವ’ಕ್ಕೆ ದೇವಾಲಯ ಸಮಿತಿ ಹಾಗೂ ಕರಗ ಸಮಿತಿ ಸಿದ್ಧತೆ ಮಾಡಿಕೊಳ್ಳಲಾಗಿದೆ.</p>.<p>29ರಂದು ನಗರದ ಪಂಪಿನಕೆರೆಯಲ್ಲಿ ನಾಲ್ಕು ಶಕ್ತಿ ದೇವತೆಗಳಾದ ಕಂಚಿ ಕಾಮಾಕ್ಷಿಯಮ್ಮ, ಕೋಟೆ ಮಾರಿಯಮ್ಮ, ಕುಂದೂರು ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮನ ದೇವಾಲಯಗಳ ಆಯಾ ಸಮಿತಿ ಕರಗೋತ್ಸವವನ್ನು ಆರಂಭಿಸಲಾಗುತ್ತಿದೆ. ಈ ಬಾರಿ ಒಟ್ಟಾಗಿ ಕರಗ ಹೊರಡುವುದು ವಿಶೇಷ.</p>.<p>ಕರಗವು ಸೆ. 30ರಿಂದ ಅ.3ರವರೆಗೆ ಕರಗಗಳು ಸಂಪ್ರದಾಯದಂತೆ ನಗರ ಪ್ರದಕ್ಷಿಣೆ ಮಾಡಲಿದ್ದು ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ಮಡಿಕೇರಿ ರಾಜಬೀದಿಯಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ.</p>.<p>29ರಂದು ಮಧ್ಯಾಹ್ನ 2ಕ್ಕೆ ಕರಗಗಳನ್ನು ಶೃಂಗರಿಸಲು ಪಂಪಿನಕೆರೆಗೆ ಒಟ್ಟಾಗಿ ದೇವಾಲಯಗಳಿಂದ ಕರಗ ಕೊಂಡೊಯ್ಯಲಾಗುವುದು ಎಂದು ನಗರದ ಕಂಚಿಕಾಮಾಕ್ಷಿ ದೇವಾಲಯ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಕರಗ ಸಿದ್ಧತೆಯ ನಂತರ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಸಂಜೆ 6ರ ನಂತರ ಪಂಪಿನ ಕೆರೆಯಿಂದ ಮೆರವಣಿಗೆ ಆರಂಭವಾಗಲಿದೆ. ಕಂಚಿಕಾಮಾಕ್ಷಿಯಮ್ಮ ದೇವಾಲಯದ ಮಹಿಳಾ ಸದಸ್ಯರು ಈ ಬಾರಿ ಕಲಶಗಳೊಂದಿಗೆ ನಾಲ್ಕು ಶಕ್ತಿ ದೇವತೆಗಳ ಕರಗಗಳನ್ನು ಬರ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.</p>.<p>ಸಂಜೆ ಪಂಪಿನ ಕೆರೆಯಿಂದ ಹೊರಡುವ ಕರಗಗಳು ಭಕ್ತರಿಂದ ಪೂಜೆ ಸ್ವೀಕರಿಸಿಕೊಂಡು ಶ್ರೀಬಸವೇಶ್ವರ, ಚೌಡೇಶ್ವರಿ, ಕೋದಂಡರಾಮ ಹಾಗೂ ಕನ್ನಿಕಾ ಪರಮೇಶ್ವರಿ ದೇವಾಲಯಗಳಿಗೆ ತೆರಳಿ ಪೇಟೆ ರಾಮ ಮಂದಿರಕ್ಕೆ ಸೇರಲಿವೆ. ಅಲ್ಲಿಂದ ಕರಗಗಳು ತಮ್ಮ ತಮ್ಮ ದೇವಾಲಯಗಳಿಗೆ ತೆರಳಲಿವೆ ಎಂದರು.</p>.<p>ಕೋಟೆ ಮಾರಿಯಮ್ಮ ದೇವಾಲಯ ಪ್ರಧಾನ ಅರ್ಚಕ ಉಮೇಶ್ ಸುಬ್ರಮಣಿ ಮಾತನಾಡಿ, 4 ಕರಗಗಳು ಒಟ್ಟಾಗಿ ನಗರ ಪ್ರದಕ್ಷಿಣೆ ಮಾಡುತ್ತವೆ. ಬನ್ನಿಮಂಟಪದವರೆಗೆ ತೆರಳಿ ಅ. 9ರಂದು ಬೆಳಗಿನ ಜಾವ ಬನ್ನಿ ಮಂಟಪದಲ್ಲಿ ‘ಬನ್ನಿ’ ಕಡಿಯಲಾಗುವುದು ಎಂದು ತಿಳಿಸಿದರು.</p>.<p class="Subhead"><strong>225 ವರ್ಷಗಳ ಇತಿಹಾಸ:</strong>ದಸರಾ ಉತ್ಸವ ಕರಗಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತ ಬರುತ್ತಿದೆ. ಆಗಿನ ಕಾಲದಿಂದಲೂ ಮಡಿಕೇರಿಯಲ್ಲಿ ನೆಲೆಸಿರುವ ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವನ್ನು ಆರಾಧಿಸಿಕೊಂಡು ಬರುತ್ತಿರುವುದು ಐತಿಹಾಸಿಕ ದಸರಾ ಉತ್ಸವದ ವಿಶೇಷ.</p>.<p>ಪತ್ರಿಕಾಗೋಷ್ಠಿಯಲ್ಲಿ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಪ್ರಧಾನ ಅರ್ಚಕ ವಿ.ಪಿ.ಚಾಮಿ, ಅರ್ಚಕ ಬಾಲಕೃಷ್ಣ, ದಂಡಿನ ಮಾರಿಯಮ್ಮ ದೇವಾಲಯ ಅರ್ಚಕ ಉಮೇಶ್, ಕಂಚಿ ಕಾಮಾಕ್ಷಿ ದೇವಾಲಯ ಅರ್ಚಕ ನವೀನ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>