‘ಜಿಲ್ಲೆಯಲ್ಲಿ ಚಿತ್ರಕಲಾ ಶಿಬಿರ ಏರ್ಪಡಿಸುವುದು, ಗಾಳಿಪಟ ಹಾಗೂ ಬಲೂನ್ ಹಾರಿಸುವುದು, ರಂಗೋಲಿ ಸ್ಪರ್ಧೆ, ಗೀತಾ ಗಾಯನ, ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಜಿಲ್ಲೆಯಲ್ಲಿನ ಎಲ್ಲಾ ಹೆದ್ದಾರಿ ಫಲಕಗಳಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಕಲೆ, ಸೇನೆ, ಕ್ರೀಡೆ, ಕೃಷಿ, ತೋಟಗಾರಿಕೆ ಹೀಗೆ ಹಲವು ಸ್ಥಳೀಯ ಸಂಸ್ಕೃತಿಯನ್ನು ಬಿಂಬಿಸುವ 20 ಕ್ಕೂ ಹೆಚ್ಚು ಮಾದರಿಯ ಹೆದ್ದಾರಿ ಫಲಕಗಳನ್ನು ಅಳವಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.