<p><strong>ಮಡಿಕೇರಿ:</strong> ‘ಕೊಡಗು ಜಿಲ್ಲೆಯಲ್ಲಿರುವ ಎಲ್ಲ ಹೋಂಸ್ಟೇಗಳು ಹಾಗೂ ರೆಸಾರ್ಟ್ ಮಾಲೀಕರು ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ಅವರು ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದರು.</p>.<p>‘ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>‘ಮತದಾನದ 48 ಗಂಟೆ ಮುಂಚಿತವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ಹಲವು ಸಲಹೆ ನೀಡಿದರು. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ, ಅವು ರಾಜಕೀಯ ಪ್ರೇರಿತವಾಗಿರಬಾರದು. ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಬಾರದು’ ಎಂದರು.</p>.<p>ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲಾಗುವುದು ಎಂದು ತಿಳಿಸಿದರು.</p>.<p>ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಕಾರ್ಯದರ್ಶಿ ನಾಜೀರ್ ಅಹಮ್ಮದ್, ಖಜಾಂಜಿ ಕೆ.ಕೆ.ಭಾಸ್ಕರ್, ಹೋಂ ಸ್ಟೇ ಅಸೋಷಿಯೇಷನ್ ಕಾರ್ಯದರ್ಶಿ ಮೋಂತಿ ಗಣೇಶ್, ನಿರ್ದೇಶಕರಾದ ಅಂಬೇಕಲ್ ನವೀನ್ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಇದ್ದರು.</p>.<p class="Subhead">ಮಕ್ಕಳ ಬಳಕೆ ನಿಷೇಧ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಯಾವುದೇ ಚುನಾವಣಾ ಸಂಬಂಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ಕೊಡಗು ಜಿಲ್ಲೆಯಲ್ಲಿರುವ ಎಲ್ಲ ಹೋಂಸ್ಟೇಗಳು ಹಾಗೂ ರೆಸಾರ್ಟ್ ಮಾಲೀಕರು ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಗುರುವಾರ ಅವರು ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದರು.</p>.<p>‘ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>‘ಮತದಾನದ 48 ಗಂಟೆ ಮುಂಚಿತವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ಹಲವು ಸಲಹೆ ನೀಡಿದರು. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ, ಅವು ರಾಜಕೀಯ ಪ್ರೇರಿತವಾಗಿರಬಾರದು. ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಬಾರದು’ ಎಂದರು.</p>.<p>ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲಾಗುವುದು ಎಂದು ತಿಳಿಸಿದರು.</p>.<p>ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಕಾರ್ಯದರ್ಶಿ ನಾಜೀರ್ ಅಹಮ್ಮದ್, ಖಜಾಂಜಿ ಕೆ.ಕೆ.ಭಾಸ್ಕರ್, ಹೋಂ ಸ್ಟೇ ಅಸೋಷಿಯೇಷನ್ ಕಾರ್ಯದರ್ಶಿ ಮೋಂತಿ ಗಣೇಶ್, ನಿರ್ದೇಶಕರಾದ ಅಂಬೇಕಲ್ ನವೀನ್ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಇದ್ದರು.</p>.<p class="Subhead">ಮಕ್ಕಳ ಬಳಕೆ ನಿಷೇಧ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಯಾವುದೇ ಚುನಾವಣಾ ಸಂಬಂಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>