ಮಡಿಕೇರಿ: ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಡಿಕೇರಿಯ ಅಶೋಕಪುರ, ಮಹದೇವಪೇಟೆ, ಮುತ್ತಪ್ಪ ದೇವಾಲಯ, ಎ.ವಿ ಶಾಲೆ, ಕೆಎಸ್ಆರ್ಟಿಸಿ ಘಟಕ, ಹೊಸ ಬಡಾವಣೆ ಮತ್ತಿತರ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.
18 ವರ್ಷ ತುಂಬಿದವರು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಸ್ಥಳಾಂತರ ಆಗಿದ್ದಲ್ಲಿ ಸರಿಪಡಿಸಿಕೊಳ್ಳಬೇಕು. ಈ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ಒದಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲಾಡಳಿತ ಜೊತೆ ಸಹಕರಿಸುವಂತೆ ಕೋರಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇದ್ದರು.