ಕಾವೇರಿ ನದಿ ಭಾಗದಲ್ಲಿ ಬುಧವಾರ ಪರಿಶೀಲನೆ ನಡೆಸಿದ ಅವರು, ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆ ಪ್ರಮುಖರು ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಪ್ರಥಮ ಹಂತದಲ್ಲಿ ಕೊಪ್ಪ ಕಾವೇರಿ ಸೇತುವೆ ಕೆಳಭಾಗದಲ್ಲಿ ನದಿ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಈ ಸಂಬಂಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಅಂದಾಜು ಪಟ್ಟಿಯನ್ನು ಸಲ್ಲಿಸಿದ್ದು, ಗುರುವಾರ ಬೆಳಗ್ಗೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗುವುದು ಎಂದು ಅವರು ಹೇಳಿದರು.