<p><strong>ನಾಪೋಕ್ಲು:</strong> ‘ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಕೊಳಕೇರಿ ಗ್ರಾಮದ ಬೆಳೆಗಾರರಾದ ಕೇಟೋಳಿರ ರೆಮ್ಮಿ, ನೆಡುಮಂಡ ಕೃತಿ, ಮುದ್ದಪ್ಪ ಬೇತು ಗ್ರಾಮದ ಅಪ್ಪನೆರವಂಡ ಕಿರಣ್ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಮುದ್ರಾ ಯೋಜನೆಯಡಿಯಲ್ಲಿ ಶೇ 13 ಬಡ್ಡಿ ದರದಲ್ಲಿ ₹ 1 ಲಕ್ಷನ್ನು ನಾವು ಸಾಲವಾಗಿ ಪಡೆದಿದ್ದು ನಾಲ್ಕು ವರ್ಷಗಳಿಂದ ವಾರ್ಷಿಕ ಬಡ್ಡಿಯನ್ನು ಪಾವತಿಸಿ ಸಾಲವನ್ನು ನವೀಕರಿಸ ಲಾಗಿದೆ. ಆದರೆ, ಈ ವರ್ಷ ಬಡ್ಡಿ ಪಾವತಿಸಿ ಸಾಲ ಮರುಪಾವತಿಸಲು ನಾಪೋಕ್ಲು ಡಿಸಿಸಿ ಬ್ಯಾಂಕಿಗೆ ತೆರಳಿದ ಸಂದರ್ಭ ಬಡ್ಡಿ ಮಾತ್ರ ಪಾವತಿಸಿದರೆ ಸಾಲದು ಅಸಲಿನಲ್ಲಿ ₹ 20 ಸಾವಿರ ಪಾವತಿಸಬೇಕೆಂದು ಬ್ಯಾಂಕ್ ಅಧ್ಯಕ್ಷರು ಆದೇಶಿಸಿದ್ದಾರೆ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ’ ಎಂ ದರು.</p>.<p>ಈ ಷರತ್ತುಗಳು ಸಾಲ ಪಡೆಯುವ ಸಂದರ್ಭದಲ್ಲಿ ಇರಲಿಲ್ಲ. ಈಗ ಏಕಾಏಕಿ ಗ್ರಾಹಕರ ಮೇಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹೊಸ ಕಾನೂನು ಹೇರುತ್ತಿರುವುದು ಸರಿಯಲ್ಲ ಎಂದರು.</p>.<p>‘ಕೊರೊನಾ ಕಾರಣದಿಂದ ರೈತಾಪಿ ವರ್ಗ, ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಗ್ರಾಹಕರಿಗೆ ಅನುಕೂಲವಾಗುವಂತೆ ಬಡ್ಡಿ ಮಾತ್ರ ಪಾವತಿಸಿ ಸಾಲ ನವೀಕರಣ ಮಾಡುವಂತೆ ಅನುಕೂಲ ಮಾಡಿಕೊಡಬೇಕು’ ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ‘ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಕೊಳಕೇರಿ ಗ್ರಾಮದ ಬೆಳೆಗಾರರಾದ ಕೇಟೋಳಿರ ರೆಮ್ಮಿ, ನೆಡುಮಂಡ ಕೃತಿ, ಮುದ್ದಪ್ಪ ಬೇತು ಗ್ರಾಮದ ಅಪ್ಪನೆರವಂಡ ಕಿರಣ್ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಮುದ್ರಾ ಯೋಜನೆಯಡಿಯಲ್ಲಿ ಶೇ 13 ಬಡ್ಡಿ ದರದಲ್ಲಿ ₹ 1 ಲಕ್ಷನ್ನು ನಾವು ಸಾಲವಾಗಿ ಪಡೆದಿದ್ದು ನಾಲ್ಕು ವರ್ಷಗಳಿಂದ ವಾರ್ಷಿಕ ಬಡ್ಡಿಯನ್ನು ಪಾವತಿಸಿ ಸಾಲವನ್ನು ನವೀಕರಿಸ ಲಾಗಿದೆ. ಆದರೆ, ಈ ವರ್ಷ ಬಡ್ಡಿ ಪಾವತಿಸಿ ಸಾಲ ಮರುಪಾವತಿಸಲು ನಾಪೋಕ್ಲು ಡಿಸಿಸಿ ಬ್ಯಾಂಕಿಗೆ ತೆರಳಿದ ಸಂದರ್ಭ ಬಡ್ಡಿ ಮಾತ್ರ ಪಾವತಿಸಿದರೆ ಸಾಲದು ಅಸಲಿನಲ್ಲಿ ₹ 20 ಸಾವಿರ ಪಾವತಿಸಬೇಕೆಂದು ಬ್ಯಾಂಕ್ ಅಧ್ಯಕ್ಷರು ಆದೇಶಿಸಿದ್ದಾರೆ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ’ ಎಂ ದರು.</p>.<p>ಈ ಷರತ್ತುಗಳು ಸಾಲ ಪಡೆಯುವ ಸಂದರ್ಭದಲ್ಲಿ ಇರಲಿಲ್ಲ. ಈಗ ಏಕಾಏಕಿ ಗ್ರಾಹಕರ ಮೇಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹೊಸ ಕಾನೂನು ಹೇರುತ್ತಿರುವುದು ಸರಿಯಲ್ಲ ಎಂದರು.</p>.<p>‘ಕೊರೊನಾ ಕಾರಣದಿಂದ ರೈತಾಪಿ ವರ್ಗ, ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಗ್ರಾಹಕರಿಗೆ ಅನುಕೂಲವಾಗುವಂತೆ ಬಡ್ಡಿ ಮಾತ್ರ ಪಾವತಿಸಿ ಸಾಲ ನವೀಕರಣ ಮಾಡುವಂತೆ ಅನುಕೂಲ ಮಾಡಿಕೊಡಬೇಕು’ ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>