ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಮುದ್ರಾ ಯೋಜನೆಯಡಿಯಲ್ಲಿ ಶೇ 13 ಬಡ್ಡಿ ದರದಲ್ಲಿ ₹ 1 ಲಕ್ಷನ್ನು ನಾವು ಸಾಲವಾಗಿ ಪಡೆದಿದ್ದು ನಾಲ್ಕು ವರ್ಷಗಳಿಂದ ವಾರ್ಷಿಕ ಬಡ್ಡಿಯನ್ನು ಪಾವತಿಸಿ ಸಾಲವನ್ನು ನವೀಕರಿಸ ಲಾಗಿದೆ. ಆದರೆ, ಈ ವರ್ಷ ಬಡ್ಡಿ ಪಾವತಿಸಿ ಸಾಲ ಮರುಪಾವತಿಸಲು ನಾಪೋಕ್ಲು ಡಿಸಿಸಿ ಬ್ಯಾಂಕಿಗೆ ತೆರಳಿದ ಸಂದರ್ಭ ಬಡ್ಡಿ ಮಾತ್ರ ಪಾವತಿಸಿದರೆ ಸಾಲದು ಅಸಲಿನಲ್ಲಿ ₹ 20 ಸಾವಿರ ಪಾವತಿಸಬೇಕೆಂದು ಬ್ಯಾಂಕ್ ಅಧ್ಯಕ್ಷರು ಆದೇಶಿಸಿದ್ದಾರೆ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ’ ಎಂ ದರು.