ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರುಗಂಟಿ ಮಣಿಮುತ್ತು ಮೃತದೇಹ ಪತ್ತೆ

ಹೇಮಾವತಿ ನದಿಯಲ್ಲಿ ಎನ್.ಡಿ.ಆರ್.ಎಫ್. ತಂಡದಿಂದ ಶೋಧ ಕಾರ್ಯ
Last Updated 9 ಜೂನ್ 2021, 2:54 IST
ಅಕ್ಷರ ಗಾತ್ರ

ಶನಿವಾರಸಂತೆ: ಸೋಮವಾರ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ನೀರುಗಂಟಿ ಮಣಿಮುತ್ತು (34) ಮೃತದೇಹವನ್ನು ಮಂಗಳವಾರ ಬೆಳಿಗ್ಗೆ ಮಡಿಕೇರಿಯಿಂದ ಬಂದಎನ್.ಡಿ.ಆರ್.ಎಫ್‌ನ 18 ಸಿಬ್ಬಂದಿ, ಎರಡು ಮೋಟಾರ್ ಬೋಟ್‌ಗಳಲ್ಲಿ ಶೋಧ ಕಾರ್ಯ ನಡೆಸಿ ಪತ್ತೆ
ಹಚ್ಚಿದರು.

ಶನಿವಾರಸಂತೆ ಠಾಣೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಪರಶಿವಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಎನ್.ಡಿ.ಆರ್.ಎಫ್ ತಂಡದ ಕಮಾಂಡರ್ ಬಬ್ಲೂ ಬಿಶ್ವಾಸ್ ಅವರಿಂದ ಶೋಧ ಕಾರ್ಯದ ಮಾಹಿತಿ ಪಡೆದರು.

ಮುಂಜಾನೆಯಿಂದ ಸಂಜೆವರೆಗೂ ಶೋಧ ಕಾರ್ಯ ನಡೆದು 4.20ರ ಸಮಯಕ್ಕೆ ನದಿಗೆ ಹಾರಿದ ಸ್ಥಳದಿಂದ 30 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಯಿತು.

‘ನಮ್ಮ ತಂಡಕ್ಕೆ ಇದೊಂದು ಸವಾಲಿನ ಕಾರ್ಯಾಚರಣೆ ಆಗಿತ್ತು. ನದಿಯ ಅಡಿಯಲ್ಲಿ ಕಲ್ಲು, ಸುಳಿ ಇದ್ದು, ಕೆಸರು ನೀರಿನಲ್ಲಿ ಮೃತದೇಹ ಸಿಕ್ಕಿಹಾಕಿಕೊಂಡಿತ್ತು. ಸ್ಥಳೀಯ ಪೊಲೀಸರು, ಸಾರ್ವಜನಿಕರು, ಗ್ರಾಮ ಪಂಚಾಯಿತಿಯವರು ಸಂಪೂರ್ಣ ಸಹಕಾರ ನೀಡಿದರು’ ಎಂದುಬಬ್ಲೂ ಬಿಶ್ವಾಸ್ ಮಾಹಿತಿ ನೀಡಿದರು.

ಮೃತ ಮಣಿಮುತ್ತುವಿನ ಕುಟುಂಬಸ್ಥರು ತಮಿಳುನಾಡಿನಿಂದ ಬಂದರು. ತಂದೆ ನೀಡಿದ ದೂರಿನ ಅನ್ವಯ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.

ಸ್ಥಳದಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಪರಶಿವಮೂರ್ತಿ, ಕೊಡ್ಲಿಪೇಟೆ ಉಪ ಠಾಣೆ ಎಎಸ್ಐ ಚೆನ್ನಯ್ಯ, ಹೆಡ್ ಕಾನ್‌ಸ್ಟೆಬಲ್‌ ಡಿಂಪಲ್, ಸಿಬ್ಬಂದಿ, ಕಂದಾಯ ಅಧಿಕಾರಿ ಮನುಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯರು, ಪಿಡಿಒ ಹರೀಶ್, ಸಿಬ್ಬಂದಿ ಹಾಗೂ ಮೃತನ ಕುಟುಂಬಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT