ಮಡಿಕೇರಿ: ಮೇಯಲು ಬಿಟ್ಟಿದ್ದ ದನಗಳನ್ನು ಮನೆಗೆ ಹೊಡೆದುಕೊಂಡು ಬರಲು ತೆರಳಿದ್ದ ವ್ಯಕ್ತಿಯೊಬ್ಬರು ಬೆಟ್ಟದಿಂದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ತಾಲ್ಲೂಕಿನ ಬೆಟ್ಟಗೇರಿಯ ಗ್ರಾಮದ ಕಡ್ಲೇರ ಮೋಹನ್ (47) ಮೃತಪಟ್ಟವರು. ಶುಕ್ರವಾರ ಸಂಜೆ ಭಾರಿ ಮಳೆ ಸುರಿಯುತ್ತಿತ್ತು. ಆಗ ಬೆಟ್ಟದಿಂದ ಜಾರಿ ಬಿದ್ದು ಮೇಲಕ್ಕೆ ಬರಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.