<p><strong>ಮಡಿಕೇರಿ:</strong> ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದಿಂದ ಸದಸ್ಯರಿಗೆ ನೀಡಲಾಗುತ್ತಿದ್ದ ಮರಣ ನಿಧಿಯ ಮೊತ್ತ ₹ 5 ಸಾವಿರದಿಂದ ₹ 10 ಸಾವಿರಕ್ಕೆ ಏರಿಕೆ ಮಾಡಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ತಿಳಿಸಿದರು.</p>.<p>ಏರಿಕೆಯಾದ ಮೊತ್ತವನ್ನು 2027 ಜನವರಿ 27ರ ನಂತರ ಮರಣ ಹೊಂದುವ ಸದಸ್ಯರ ಕುಟುಂಬಕ್ಕೆ ನೀಡುವ ನಿಯಮವನ್ನು ಜಾರಿಗೆ ತರಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಮೊತ್ತದ ಏರಿಕೆಗೆ ಅನುಗುಣವಾಗಿ ಮತ್ತೊಮ್ಮೆ ಸದಸ್ಯತ್ವ ಪಡೆಯಲು ನಿವೃತ್ತ ಪೊಲೀಸರು ಪತಿ ಹಾಗೂ ಪತ್ನಿ ತಲಾ ₹1 ಸಾವಿರ ನೀಡಿ ಸದಸ್ಯತ್ವ ಪಡೆಯಬೇಕು. ಮರಣ ನಿಧಿಯ ಲಾಭವನ್ನು ಪತಿ ಹಾಗೂ ಪತ್ನಿ ಇಬ್ಬರಿಗೂ ₹ 10 ಸಾವಿರದಂತೆ ನೀಡಲಾಗುವುದು ಎಂದರು.</p>.<p>2027 ಜನವರಿ 27ಕ್ಕೂ ಮುಂಚೆ ಮರಣ ಹೊಂದಿದವರಿಗೂ ₹ 10 ಸಾವಿರ ನೀಡಬೇಕೆ ಎನ್ನುವ ಬಗ್ಗೆ ಸಂಘದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಜೂನ್ 30ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ 9448587975 ಸಂಪರ್ಕಿಸಬಹುದು ಎಂದರು.</p>.<p>ಸಂಘದ ನಿರ್ದೇಶಕರಾದ ಕೆ.ವೈ.ಹಮೀದ್ ಹಾಗೂ ಎನ್.ಎ.ಜಗದೀಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದಿಂದ ಸದಸ್ಯರಿಗೆ ನೀಡಲಾಗುತ್ತಿದ್ದ ಮರಣ ನಿಧಿಯ ಮೊತ್ತ ₹ 5 ಸಾವಿರದಿಂದ ₹ 10 ಸಾವಿರಕ್ಕೆ ಏರಿಕೆ ಮಾಡಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ತಿಳಿಸಿದರು.</p>.<p>ಏರಿಕೆಯಾದ ಮೊತ್ತವನ್ನು 2027 ಜನವರಿ 27ರ ನಂತರ ಮರಣ ಹೊಂದುವ ಸದಸ್ಯರ ಕುಟುಂಬಕ್ಕೆ ನೀಡುವ ನಿಯಮವನ್ನು ಜಾರಿಗೆ ತರಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಮೊತ್ತದ ಏರಿಕೆಗೆ ಅನುಗುಣವಾಗಿ ಮತ್ತೊಮ್ಮೆ ಸದಸ್ಯತ್ವ ಪಡೆಯಲು ನಿವೃತ್ತ ಪೊಲೀಸರು ಪತಿ ಹಾಗೂ ಪತ್ನಿ ತಲಾ ₹1 ಸಾವಿರ ನೀಡಿ ಸದಸ್ಯತ್ವ ಪಡೆಯಬೇಕು. ಮರಣ ನಿಧಿಯ ಲಾಭವನ್ನು ಪತಿ ಹಾಗೂ ಪತ್ನಿ ಇಬ್ಬರಿಗೂ ₹ 10 ಸಾವಿರದಂತೆ ನೀಡಲಾಗುವುದು ಎಂದರು.</p>.<p>2027 ಜನವರಿ 27ಕ್ಕೂ ಮುಂಚೆ ಮರಣ ಹೊಂದಿದವರಿಗೂ ₹ 10 ಸಾವಿರ ನೀಡಬೇಕೆ ಎನ್ನುವ ಬಗ್ಗೆ ಸಂಘದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಜೂನ್ 30ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ 9448587975 ಸಂಪರ್ಕಿಸಬಹುದು ಎಂದರು.</p>.<p>ಸಂಘದ ನಿರ್ದೇಶಕರಾದ ಕೆ.ವೈ.ಹಮೀದ್ ಹಾಗೂ ಎನ್.ಎ.ಜಗದೀಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>