ಶನಿವಾರಸಂತೆ: ಸಮೀಪದ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರಸ್ನೇಹಿ ಹಸಿರು ದೀಪಾವಳಿ ಆಚರಣೆ ಮಾಡಲಾಯಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ದೀಪಗಳನ್ನು ಹಚ್ಚಿ ಸಂಭ್ರಮಿಸಿದರು.
ಶಾಲೆಯ ಇಕೋ ಕ್ಲಬ್ ಸಂಚಾಲಕ ಶಿಕ್ಷಕ ಸಿ.ಎಸ್.ಸತೀಶ್ ಮಾತನಾಡಿ, ‘ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ಬಣ್ಣದ ಆಕಾಶ ಬುಟ್ಟಿಗಳನ್ನು ಮನೆಯಲ್ಲಿರಿಸಿ ಹಬ್ಬ ಆಚರಿಸಬೇಕು. ಪಟಾಕಿ ಹೊಡೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ’ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿಂದು ಸುರೇಶ್, ಸದಸ್ಯರಾದ ಗುಲಾಬಿ, ಕವಿತಾ, ಧರ್ಮಾವತಿ, ಆಶಾ ಕಾರ್ಯಕರ್ತೆ ರೂಪಾ ಹಾಜರಿದ್ದರು.