<p><strong>ಶನಿವಾರಸಂತೆ:</strong> ಸಮೀಪದ ಕಿಬ್ಬೆಟ್ಟ ಗ್ರಾಮದ ಬಸ್ ತಂಗುದಾಣದ ಬಳಿ ಜಿಂಕೆ, ಕಾಡುಕುರಿಯ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಸೋಮವಾರಪೇಟೆ ತಾಲ್ಲೂಕು ಸಿಐಡಿ ಅರಣ್ಯ ಘಟಕದ ಅಧಿಕಾರಿ ಎಂ.ಡಿ.ಅಪ್ಪಾಜಿ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಹಾಸನ ಜಿಲ್ಲೆಯ ಹೊಳೆನರಸೀಪುರದ ಫ್ಲೋರ್ ಮಿಲ್ ಆಪರೇಟರ್ ಆರೋಪಿ ಎಚ್.ಎಂ.ಪ್ರಮೋದ್ ಎಂಬಾತನನ್ನು ಬಂಧಿಸಿದ್ದಾರೆ. ಶನಿವಾರಸಂತೆ ಹೋಬಳಿಯ ನಿಡ್ತ ಕೊಪ್ಪಲು ಗ್ರಾಮದ ಎನ್.ಎನ್.ಯತೀಶ್ ಪರಾರಿಯಾದ ಆರೋಪಿ.</p>.<p>ಇಬ್ಬರೂ ಜಿಂಕೆ, ಕಾಡುಕುರಿಯ ಕೊಂಬುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಅನ್ವಯ ದಾಳಿ ನಡೆಸಿದ ಅರಣ್ಯ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಚೀಲದಲ್ಲಿದ್ದ ಕಾಡುಕುರಿ 1 ಹಾಗೂ ಜಿಂಕೆಯ 2 ಕೊಂಬುಗಳನ್ನು ಮತ್ತು ಸ್ಥಳದಲ್ಲಿದ್ದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಅರಣ್ಯ ಘಟಕದ ಅಧಿಕಾರಿ ಎಂ.ಡಿ. ಅಪ್ಪಾಜಿ, ಹೆಡ್ ಕಾನ್ಸ್ಟೆಬಲ್ಗಳಾದ ಕೆ.ಎಸ್.ಚಂಗಪ್ಪ, ಎನ್.ಆರ್.ರಮೇಶ್, ಎನ್.ಎಂ.ಗಣೇಶ್, ಸಿಬ್ಬಂದಿ ಚಂದ್ರಶೇಖರ್, ಯೋಗೇಶ್ ಪಾಲ್ಗೊಂಡಿದ್ದರು.</p>.<p>ಸಿ.ಐ.ಡಿ.ಅರಣ್ಯ ಘಟಕದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ಸಮೀಪದ ಕಿಬ್ಬೆಟ್ಟ ಗ್ರಾಮದ ಬಸ್ ತಂಗುದಾಣದ ಬಳಿ ಜಿಂಕೆ, ಕಾಡುಕುರಿಯ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಸೋಮವಾರಪೇಟೆ ತಾಲ್ಲೂಕು ಸಿಐಡಿ ಅರಣ್ಯ ಘಟಕದ ಅಧಿಕಾರಿ ಎಂ.ಡಿ.ಅಪ್ಪಾಜಿ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಹಾಸನ ಜಿಲ್ಲೆಯ ಹೊಳೆನರಸೀಪುರದ ಫ್ಲೋರ್ ಮಿಲ್ ಆಪರೇಟರ್ ಆರೋಪಿ ಎಚ್.ಎಂ.ಪ್ರಮೋದ್ ಎಂಬಾತನನ್ನು ಬಂಧಿಸಿದ್ದಾರೆ. ಶನಿವಾರಸಂತೆ ಹೋಬಳಿಯ ನಿಡ್ತ ಕೊಪ್ಪಲು ಗ್ರಾಮದ ಎನ್.ಎನ್.ಯತೀಶ್ ಪರಾರಿಯಾದ ಆರೋಪಿ.</p>.<p>ಇಬ್ಬರೂ ಜಿಂಕೆ, ಕಾಡುಕುರಿಯ ಕೊಂಬುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಅನ್ವಯ ದಾಳಿ ನಡೆಸಿದ ಅರಣ್ಯ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಚೀಲದಲ್ಲಿದ್ದ ಕಾಡುಕುರಿ 1 ಹಾಗೂ ಜಿಂಕೆಯ 2 ಕೊಂಬುಗಳನ್ನು ಮತ್ತು ಸ್ಥಳದಲ್ಲಿದ್ದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಅರಣ್ಯ ಘಟಕದ ಅಧಿಕಾರಿ ಎಂ.ಡಿ. ಅಪ್ಪಾಜಿ, ಹೆಡ್ ಕಾನ್ಸ್ಟೆಬಲ್ಗಳಾದ ಕೆ.ಎಸ್.ಚಂಗಪ್ಪ, ಎನ್.ಆರ್.ರಮೇಶ್, ಎನ್.ಎಂ.ಗಣೇಶ್, ಸಿಬ್ಬಂದಿ ಚಂದ್ರಶೇಖರ್, ಯೋಗೇಶ್ ಪಾಲ್ಗೊಂಡಿದ್ದರು.</p>.<p>ಸಿ.ಐ.ಡಿ.ಅರಣ್ಯ ಘಟಕದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>