ಕಾರಿನಲ್ಲಿ ತೆರೆಳುತ್ತಿದ್ದ ರಾಜೇಶ್ ಭಾರ್ತಿ ಗ್ಯಾಂಗ್ ಮೇಲೆ ದೆಹಲಿ ದಕ್ಷಿಣ ಭಾಗದ ಫತೇಹ್ಪುರ್ ಬೆರಿಯ ಗ್ರಾಮವೊಂದರ ಸಮೀಪ ಪೊಲೀಸರು ಎನ್ಕೌಂಟರ್ ನಡೆಸಿದ್ದಾರೆ. ಪೊಲೀಸ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗ್ಯಾಂಗ್ನ ಸದಸ್ಯರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೂ ಮುನ್ನವೇ ರಾಜೇಶ್ ಭಾರ್ತಿ ಸೇರಿ ನಾಲ್ಕು ಮಂದಿ ಮೃತಪಟ್ಟಿದ್ದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.