ಬೆಂಗಳೂರು: ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘದ ವಿದ್ಯಾರ್ಥಿನಿಲಯದಲ್ಲಿ ವಿದ್ಯಾಭ್ಯಾಸ ಮಾಡ ಬಯಸುವ ತಿಗಳ ಸಮುದಾಯದ(ಅಗ್ನಿವಂಶ ಕ್ಷತ್ರಿಯ) ಮತ್ತು ಇತರೆ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜಾಜಿನಗರದಲ್ಲಿನ ಬಾಲಕರ ವಿದ್ಯಾರ್ಥಿ ನಿಲಯ, ವಿಜಯನಗರದಲ್ಲಿನ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2018–19ನೇ ಸಾಲಿನಲ್ಲಿ ಪದವಿ ಪೂರ್ವ, ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ತರಗತಿಯಲ್ಲಿ ಅಧ್ಯಯನ ಮಾಡುವವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಇದೇ 20ರೊಳಗೆ ಅರ್ಜಿ ಪಡೆದು, ಇದೇ 30ರೊಳಗೆ ಸಲ್ಲಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.