<p><strong>ನಾಪೋಕ್ಲು (ಕೊಡಗು ಜಿಲ್ಲೆ):</strong> ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು ಎಂದು ರಾಜ್ಯ ವಕ್ಫ್ ಮಂಡಳಿ ಸದಸ್ಯ ಶಾಫಿ ಸಅದಿ ಆಗ್ರಹಿಸಿದರು.</p>.<p>ಸಮೀಪದ ಎಮ್ಮೆಮಾಡು ಮಖಾಂ ಉರುಸ್ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>’ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ. ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆಗೊಂಡರೆ ಶೇಕಡ 35ರಷ್ಟು ಸೀಟುಗಳು ಮುಸ್ಲಿಂ ಸಮುದಾಯಕ್ಕೆ ದೊರೆಯುತ್ತವೆ. ಇದರಿಂದ ಅವರು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎನ್ನುವುದೇ ನಮ್ಮ ಉದ್ದೇಶ’ ಎಂದರು.</p>.<p>‘ಸಮುದಾಯದ ಮಕ್ಕಳು ಹೆಚ್ಚು ಹೆಚ್ಚು ಓದಬೇಕು. ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಆಗ ಮಾತ್ರ ಸಮುದಾಯದ ಪ್ರಗತಿ ಸಾಧ್ಯ’ ಎಂದು ಅವರು ತಿಳಿಸಿದರು.</p>.<p>‘ಕಳೆದ 70 ವರ್ಷಗಳಿಂದ ನಮ್ಮನ್ನಾಳಿದ ಸರ್ಕಾರಗಳು ಮುಸ್ಲಿಂ ಸಮುದಾಯದ ಸ್ಥಿತಿಗತಿಯ ಬಗ್ಗೆ ವರದಿ ತಯಾರಿಸಿರುವುದನ್ನು ಬಿಟ್ಟರೆ ಅವರಿಗೆ ಯಾವುದೇ ಸೌಲಭ್ಯ ನೀಡಿಲ್ಲ. ರಾಜಕಾರಣಿಗಳು ಹಿಂದೂ-ಮುಸ್ಲಿಮರನ್ನು ಒಡೆಯುವ ಕಾರ್ಯವನ್ನು ಕೈಬಿಟ್ಟು ಮುಸ್ಲಿಂ ಜನಾಂಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು. ಮುಂದಿನ ಬಜೆಟ್ನಲ್ಲಿ ಶೇ. 15ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ಹಾಗೂ ಅದಕ್ಕಾಗಿ ಟಾಸ್ಕ್ ಫೋರ್ಸ್ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು (ಕೊಡಗು ಜಿಲ್ಲೆ):</strong> ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು ಎಂದು ರಾಜ್ಯ ವಕ್ಫ್ ಮಂಡಳಿ ಸದಸ್ಯ ಶಾಫಿ ಸಅದಿ ಆಗ್ರಹಿಸಿದರು.</p>.<p>ಸಮೀಪದ ಎಮ್ಮೆಮಾಡು ಮಖಾಂ ಉರುಸ್ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>’ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ. ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆಗೊಂಡರೆ ಶೇಕಡ 35ರಷ್ಟು ಸೀಟುಗಳು ಮುಸ್ಲಿಂ ಸಮುದಾಯಕ್ಕೆ ದೊರೆಯುತ್ತವೆ. ಇದರಿಂದ ಅವರು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎನ್ನುವುದೇ ನಮ್ಮ ಉದ್ದೇಶ’ ಎಂದರು.</p>.<p>‘ಸಮುದಾಯದ ಮಕ್ಕಳು ಹೆಚ್ಚು ಹೆಚ್ಚು ಓದಬೇಕು. ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಆಗ ಮಾತ್ರ ಸಮುದಾಯದ ಪ್ರಗತಿ ಸಾಧ್ಯ’ ಎಂದು ಅವರು ತಿಳಿಸಿದರು.</p>.<p>‘ಕಳೆದ 70 ವರ್ಷಗಳಿಂದ ನಮ್ಮನ್ನಾಳಿದ ಸರ್ಕಾರಗಳು ಮುಸ್ಲಿಂ ಸಮುದಾಯದ ಸ್ಥಿತಿಗತಿಯ ಬಗ್ಗೆ ವರದಿ ತಯಾರಿಸಿರುವುದನ್ನು ಬಿಟ್ಟರೆ ಅವರಿಗೆ ಯಾವುದೇ ಸೌಲಭ್ಯ ನೀಡಿಲ್ಲ. ರಾಜಕಾರಣಿಗಳು ಹಿಂದೂ-ಮುಸ್ಲಿಮರನ್ನು ಒಡೆಯುವ ಕಾರ್ಯವನ್ನು ಕೈಬಿಟ್ಟು ಮುಸ್ಲಿಂ ಜನಾಂಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು. ಮುಂದಿನ ಬಜೆಟ್ನಲ್ಲಿ ಶೇ. 15ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ಹಾಗೂ ಅದಕ್ಕಾಗಿ ಟಾಸ್ಕ್ ಫೋರ್ಸ್ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>