‘ಕಳೆದ 70 ವರ್ಷಗಳಿಂದ ನಮ್ಮನ್ನಾಳಿದ ಸರ್ಕಾರಗಳು ಮುಸ್ಲಿಂ ಸಮುದಾಯದ ಸ್ಥಿತಿಗತಿಯ ಬಗ್ಗೆ ವರದಿ ತಯಾರಿಸಿರುವುದನ್ನು ಬಿಟ್ಟರೆ ಅವರಿಗೆ ಯಾವುದೇ ಸೌಲಭ್ಯ ನೀಡಿಲ್ಲ. ರಾಜಕಾರಣಿಗಳು ಹಿಂದೂ-ಮುಸ್ಲಿಮರನ್ನು ಒಡೆಯುವ ಕಾರ್ಯವನ್ನು ಕೈಬಿಟ್ಟು ಮುಸ್ಲಿಂ ಜನಾಂಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು. ಮುಂದಿನ ಬಜೆಟ್ನಲ್ಲಿ ಶೇ. 15ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ಹಾಗೂ ಅದಕ್ಕಾಗಿ ಟಾಸ್ಕ್ ಫೋರ್ಸ್ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ’ ಎಂದರು.