<p><strong>ಮಡಿಕೇರಿ:</strong> ಜಾತಿವಾರು ಜನಗಣತಿಯಲ್ಲಿ ಕೊಡವರಿಗಾಗಿಯೇ ಪ್ರತ್ಯೇಕ ‘ಕೋಡ್’ ಮತ್ತು ‘ಕಲಂ’ ಹಾಗೂ ಮುಂಬರುವ ಕ್ಷೇತ್ರ ಪುನರ್ವಿಂಗಡನೆಯ ವೇಳೆ ಕೊಡವರಿಗಾಗಿಯೇ ಪ್ರತ್ಯೇಕ ಸಂಸದೀಯ ಮತ್ತು ವಿಧಾನಸಭಾ ಸ್ಥಾನಗಳಿಗೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ನಡೆಸುತ್ತಿರುವ ಮಾನವ ಸರಪಳಿ ಸೋಮವಾರ ಪೊನ್ನಂಪೇಟೆಯಲ್ಲಿ ನಡೆಯಿತು. ಇದುವರೆಗೂ ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎನ್ಸಿ ಬಿರುನಾಣಿ, ಕಡಂಗ, ಕಕ್ಕಬ್ಬೆ, ಟಿ.ಶೆಟ್ಟಿಗೇರಿ, ಬಾಳೆಲೆಯಲ್ಲಿ ಮಾನವ ಸರಪಳಿ ರಚಿಸಿದೆ.</p>.<p>ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ರಚಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ‘ಜಾತಿಗಣತಿ ವೇಳೆ ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಲಂಅನ್ನು ಅಳವಡಿಸಬೇಕು. ಇದರಿಂದ ಸೂಕ್ಷ್ಮಾತಿಸೂಕ್ಷ್ಮ ಸಮುದಾಯ ಎನಿಸಿದ ಕೊಡವರ ಉಳಿವಿಗೆ ಸಹಕಾರಿಯಾಗುತ್ತದೆ’ ಎಂದು ಪ್ರತಿಪಾದಿಸಿದರು.</p>.<p>ಸಿಕ್ಕಿಂ ವಿಧಾನಸಭೆಯಲ್ಲಿ ಬೌದ್ಧ ಸನ್ಯಾಸಿಗಳಿಗಾಗಿಯೇ ‘ಸಂಘ’ ಎಂಬ ಮತಕ್ಷೇತ್ರ ನೀಡಲಾಗಿದೆ. ಇದೇ ರೀತಿ ಕೊಡವರಿಗಾಗಿಯೇ ಪ್ರತ್ಯೇಕವಾದ ಅಮೂರ್ತ ಮತ್ತು ವಿಶೇಷವಾದ ಸಂಸದೀಯ ಮತ್ತು ವಿಧಾನಸಭಾ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕೊಡಗಿನಲ್ಲಿ ಇಂದು ನಗರೀಕರಣ ಮತ್ತು ಭೂ ಪರಿವರ್ತನೆ ಹೆಚ್ಚಿದೆ. ಎಲ್ಲೆಂದರಲ್ಲಿ ರೆಸಾರ್ಟ್ಗಳು ಸ್ಥಾಪನೆಯಾಗುತ್ತಿವೆ. ಹೊರಗಿನ ಹೂಡಿಕೆದಾರರನ್ನು ಆಕರ್ಷಿಸುವ ಕೆಲಸ ನಡೆಯುತ್ತಿದೆ. ಇಲ್ಲಿ ಕೊಡವರು ಸುರಕ್ಷಿತ ಆಗಬೇಕಾದರೆ ಕೊಡವ ಲ್ಯಾಂಡ್ಗೆ ಪೂರಕವಾದ ಜಾತಿಗಣತಿ ಸಹಕಾರಿಯಾಗಿದೆ ಎಂದು ಪ್ರತಿಪಾದಿಸಿದರು.</p>.<p>ಕೊಡವ ಸಮುದಾಯವು ಆದಿಮಸಂಜಾತ ಏಕ-ಜನಾಂಗೀಯ ಎಂಬುದನ್ನು ಯಾರೂ ಮರೆಯಬಾರದು. ಇಂತಹ ಕೊಡವರಿಗೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು ಎಂದು ಆಗ್ರಹಿಸಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸೂರ್ಯ-ಚಂದ್ರ, ಗುರು-ಕಾರೋಣ, ಪವಿತ್ರ ಸಂವಿಧಾನ, ಜಲದೇವಿ ಕಾವೇರಿ, ಭೂ ದೇವಿ ಮತ್ತು ಪ್ರಕೃತಿ ದೇವಿಯ ಹೆಸರಿನಲ್ಲಿ ಬೇಡಿಕೆಗಳನ್ನು ಬೆಂಬಲಿಸುವ ಕುರಿತು ಪ್ರತಿಜ್ಞೆ ಸ್ವೀಕರಿಸಿದರು.</p>.<p>ಮುಂದಿನ ಮಾನವ ಸರಪಳಿ ಕಾರ್ಯಕ್ರಮವು ಜುಲೈ 7ರಂದು ನಾಪೋಕ್ನಲ್ಲಿ ನಡೆಯಲಿದೆ ಎಂದು ನಾಚಪ್ಪ ಪ್ರಕಟಿಸಿದರು.</p>.<p>ಮುಖಂಡರಾದ ರೇಖಾ ನಾಚಪ್ಪ, ಮತ್ರಂಡ ರಾಣಿ ರಾಜೇಂದ್ರ, ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಬೊಟ್ಟಂಗಡ ಗಿರೀಶ್, ಅಪ್ಪೆಂಗಡ ನಾಲೆ, ಅಜ್ಜಿಕುಟ್ಟಿರ ಲೋಕೇಶ್, ಕಿರಿಯಮಾಡ ಶೆರಿನ್, ಕಾಂಡೇರ ಸುರೇಶ್, ಚೊಟ್ಟೆಯಂಡಮಾಡ ಉದಯ, ಮಾಣಿರ ಸಂಪತ್, ಆಲೆಮಾಡ ರೋಷನ್, ಚೇಂದಿರ ಅಪ್ಪಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಜಾತಿವಾರು ಜನಗಣತಿಯಲ್ಲಿ ಕೊಡವರಿಗಾಗಿಯೇ ಪ್ರತ್ಯೇಕ ‘ಕೋಡ್’ ಮತ್ತು ‘ಕಲಂ’ ಹಾಗೂ ಮುಂಬರುವ ಕ್ಷೇತ್ರ ಪುನರ್ವಿಂಗಡನೆಯ ವೇಳೆ ಕೊಡವರಿಗಾಗಿಯೇ ಪ್ರತ್ಯೇಕ ಸಂಸದೀಯ ಮತ್ತು ವಿಧಾನಸಭಾ ಸ್ಥಾನಗಳಿಗೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ನಡೆಸುತ್ತಿರುವ ಮಾನವ ಸರಪಳಿ ಸೋಮವಾರ ಪೊನ್ನಂಪೇಟೆಯಲ್ಲಿ ನಡೆಯಿತು. ಇದುವರೆಗೂ ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎನ್ಸಿ ಬಿರುನಾಣಿ, ಕಡಂಗ, ಕಕ್ಕಬ್ಬೆ, ಟಿ.ಶೆಟ್ಟಿಗೇರಿ, ಬಾಳೆಲೆಯಲ್ಲಿ ಮಾನವ ಸರಪಳಿ ರಚಿಸಿದೆ.</p>.<p>ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ರಚಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ‘ಜಾತಿಗಣತಿ ವೇಳೆ ಕೊಡವರಿಗೆ ಪ್ರತ್ಯೇಕ ಕೋಡ್ ಮತ್ತು ಕಲಂಅನ್ನು ಅಳವಡಿಸಬೇಕು. ಇದರಿಂದ ಸೂಕ್ಷ್ಮಾತಿಸೂಕ್ಷ್ಮ ಸಮುದಾಯ ಎನಿಸಿದ ಕೊಡವರ ಉಳಿವಿಗೆ ಸಹಕಾರಿಯಾಗುತ್ತದೆ’ ಎಂದು ಪ್ರತಿಪಾದಿಸಿದರು.</p>.<p>ಸಿಕ್ಕಿಂ ವಿಧಾನಸಭೆಯಲ್ಲಿ ಬೌದ್ಧ ಸನ್ಯಾಸಿಗಳಿಗಾಗಿಯೇ ‘ಸಂಘ’ ಎಂಬ ಮತಕ್ಷೇತ್ರ ನೀಡಲಾಗಿದೆ. ಇದೇ ರೀತಿ ಕೊಡವರಿಗಾಗಿಯೇ ಪ್ರತ್ಯೇಕವಾದ ಅಮೂರ್ತ ಮತ್ತು ವಿಶೇಷವಾದ ಸಂಸದೀಯ ಮತ್ತು ವಿಧಾನಸಭಾ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕೊಡಗಿನಲ್ಲಿ ಇಂದು ನಗರೀಕರಣ ಮತ್ತು ಭೂ ಪರಿವರ್ತನೆ ಹೆಚ್ಚಿದೆ. ಎಲ್ಲೆಂದರಲ್ಲಿ ರೆಸಾರ್ಟ್ಗಳು ಸ್ಥಾಪನೆಯಾಗುತ್ತಿವೆ. ಹೊರಗಿನ ಹೂಡಿಕೆದಾರರನ್ನು ಆಕರ್ಷಿಸುವ ಕೆಲಸ ನಡೆಯುತ್ತಿದೆ. ಇಲ್ಲಿ ಕೊಡವರು ಸುರಕ್ಷಿತ ಆಗಬೇಕಾದರೆ ಕೊಡವ ಲ್ಯಾಂಡ್ಗೆ ಪೂರಕವಾದ ಜಾತಿಗಣತಿ ಸಹಕಾರಿಯಾಗಿದೆ ಎಂದು ಪ್ರತಿಪಾದಿಸಿದರು.</p>.<p>ಕೊಡವ ಸಮುದಾಯವು ಆದಿಮಸಂಜಾತ ಏಕ-ಜನಾಂಗೀಯ ಎಂಬುದನ್ನು ಯಾರೂ ಮರೆಯಬಾರದು. ಇಂತಹ ಕೊಡವರಿಗೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು ಎಂದು ಆಗ್ರಹಿಸಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸೂರ್ಯ-ಚಂದ್ರ, ಗುರು-ಕಾರೋಣ, ಪವಿತ್ರ ಸಂವಿಧಾನ, ಜಲದೇವಿ ಕಾವೇರಿ, ಭೂ ದೇವಿ ಮತ್ತು ಪ್ರಕೃತಿ ದೇವಿಯ ಹೆಸರಿನಲ್ಲಿ ಬೇಡಿಕೆಗಳನ್ನು ಬೆಂಬಲಿಸುವ ಕುರಿತು ಪ್ರತಿಜ್ಞೆ ಸ್ವೀಕರಿಸಿದರು.</p>.<p>ಮುಂದಿನ ಮಾನವ ಸರಪಳಿ ಕಾರ್ಯಕ್ರಮವು ಜುಲೈ 7ರಂದು ನಾಪೋಕ್ನಲ್ಲಿ ನಡೆಯಲಿದೆ ಎಂದು ನಾಚಪ್ಪ ಪ್ರಕಟಿಸಿದರು.</p>.<p>ಮುಖಂಡರಾದ ರೇಖಾ ನಾಚಪ್ಪ, ಮತ್ರಂಡ ರಾಣಿ ರಾಜೇಂದ್ರ, ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಬೊಟ್ಟಂಗಡ ಗಿರೀಶ್, ಅಪ್ಪೆಂಗಡ ನಾಲೆ, ಅಜ್ಜಿಕುಟ್ಟಿರ ಲೋಕೇಶ್, ಕಿರಿಯಮಾಡ ಶೆರಿನ್, ಕಾಂಡೇರ ಸುರೇಶ್, ಚೊಟ್ಟೆಯಂಡಮಾಡ ಉದಯ, ಮಾಣಿರ ಸಂಪತ್, ಆಲೆಮಾಡ ರೋಷನ್, ಚೇಂದಿರ ಅಪ್ಪಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>