<p><strong>ಸೋಮವಾರಪೇಟೆ: </strong>ಲವ್ ಜಿಹಾದ್ಗೆ ಕಠಿಣ ಕಾನೂನು ತರಬೇಕು ಎಂದು ಆಗ್ರಹಿಸಿ, ಹಿಂದೂ ಜಾಗರಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ದೇಶದೆಲ್ಲೆಡೆ ಇಸ್ಲಾಮಿಕ್ ಮತಾಂಧರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇಶ ವಿರೋಧಿ, ಹಿಂದೂ ವಿರೋಧಿ ನೀತಿಯೊಂದಿಗೆ ಸಮಾಜಘಾತುಕ ಕೃತ್ಯದಲ್ಲಿ ತೊಡಗಿದ್ದಾರೆ. ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿಸುವ ನಾಟಕವಾಡಿ, ಲವ್ ಜಿಹಾದ್ಗೆ ತಳ್ಳುತ್ತಿದ್ದಾರೆ. ಇದರಿಂದಾಗಿ ಅನೇಕ ಹೆಣ್ಣುಮಕ್ಕಳು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಕಾರಣದಿಂದ ಕಠಿಣ ಕಾನೂನು ತರುವಂತೆ ತಹಶೀಲ್ದಾರ್ ಗೋವಿಂದರಾಜ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>‘ಹರಿಯಾಣದ ಫರೀದಾಬಾದ್ನಲ್ಲಿ ಮತಾಂಧನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಹಿಂದೂ ಯುವತಿಯನ್ನು ನಡುರಸ್ತೆಯಲ್ಲಿ ಹತ್ಯೆಗೈದ ತೌಫಿಕ್ನನ್ನು ಗಲ್ಲಿಗೇರಿಸಬೇಕು. ಇಂಥ ಸಮಾಜಘಾತಕ ಕೃತ್ಯಕ್ಕೆ ಕಡಿವಾಣ ಹಾಕುವಂತೆ’ ಹಿಂಜಾವೇ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್ ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ರೂಪ, ಸತೀಶ್, ಸುನೀಲ್ ಮಾದಾಪುರ, ಬೋಜೇಗೌಡ, ಎಚ್.ಕೆ. ಮಾದಪ್ಪ, ಸಿ.ಪಿ. ಗೋಪಾಲ್, ದರ್ಶನ್ ಜೋಯಪ್ಪ, ಮಹೇಶ್ ತಿಮ್ಮಯ್ಯ, ಜಿ.ಬಿ. ಸೋಮಯ್ಯ, ಯಡವನಾಡು ರಮೇಶ್, ಶಾಂತಳ್ಳಿ ಪ್ರತಾಪ್, ಬೀರೇಬೆಟ್ಟ ವೇಣು, ಇದ್ದರು.</p>.<p>ಮನವಿ ಸಲ್ಲಿಕೆಗೂ ಮುನ್ನ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಮೆರವಣಿಗೆಯ ಮೂಲಕ ತಾಲ್ಲೂಕು ಕಚೇರಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ: </strong>ಲವ್ ಜಿಹಾದ್ಗೆ ಕಠಿಣ ಕಾನೂನು ತರಬೇಕು ಎಂದು ಆಗ್ರಹಿಸಿ, ಹಿಂದೂ ಜಾಗರಣಾ ವೇದಿಕೆ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ದೇಶದೆಲ್ಲೆಡೆ ಇಸ್ಲಾಮಿಕ್ ಮತಾಂಧರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇಶ ವಿರೋಧಿ, ಹಿಂದೂ ವಿರೋಧಿ ನೀತಿಯೊಂದಿಗೆ ಸಮಾಜಘಾತುಕ ಕೃತ್ಯದಲ್ಲಿ ತೊಡಗಿದ್ದಾರೆ. ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿಸುವ ನಾಟಕವಾಡಿ, ಲವ್ ಜಿಹಾದ್ಗೆ ತಳ್ಳುತ್ತಿದ್ದಾರೆ. ಇದರಿಂದಾಗಿ ಅನೇಕ ಹೆಣ್ಣುಮಕ್ಕಳು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಕಾರಣದಿಂದ ಕಠಿಣ ಕಾನೂನು ತರುವಂತೆ ತಹಶೀಲ್ದಾರ್ ಗೋವಿಂದರಾಜ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>‘ಹರಿಯಾಣದ ಫರೀದಾಬಾದ್ನಲ್ಲಿ ಮತಾಂಧನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಹಿಂದೂ ಯುವತಿಯನ್ನು ನಡುರಸ್ತೆಯಲ್ಲಿ ಹತ್ಯೆಗೈದ ತೌಫಿಕ್ನನ್ನು ಗಲ್ಲಿಗೇರಿಸಬೇಕು. ಇಂಥ ಸಮಾಜಘಾತಕ ಕೃತ್ಯಕ್ಕೆ ಕಡಿವಾಣ ಹಾಕುವಂತೆ’ ಹಿಂಜಾವೇ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ್ ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ಪ್ರಮುಖರಾದ ಸುಭಾಷ್ ತಿಮ್ಮಯ್ಯ, ರೂಪ, ಸತೀಶ್, ಸುನೀಲ್ ಮಾದಾಪುರ, ಬೋಜೇಗೌಡ, ಎಚ್.ಕೆ. ಮಾದಪ್ಪ, ಸಿ.ಪಿ. ಗೋಪಾಲ್, ದರ್ಶನ್ ಜೋಯಪ್ಪ, ಮಹೇಶ್ ತಿಮ್ಮಯ್ಯ, ಜಿ.ಬಿ. ಸೋಮಯ್ಯ, ಯಡವನಾಡು ರಮೇಶ್, ಶಾಂತಳ್ಳಿ ಪ್ರತಾಪ್, ಬೀರೇಬೆಟ್ಟ ವೇಣು, ಇದ್ದರು.</p>.<p>ಮನವಿ ಸಲ್ಲಿಕೆಗೂ ಮುನ್ನ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಮೆರವಣಿಗೆಯ ಮೂಲಕ ತಾಲ್ಲೂಕು ಕಚೇರಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>