ಗುರುವಾರ ನಗರದಲ್ಲಿ ಈ ಬಗ್ಗೆ ಪ್ರತಿಭಟನೆ ನಡೆಯಿತು. ‘ವರದಿ ಅನುಷ್ಠಾನಗೊಂಡರೆ, ಮೀಸಲಾತಿ ದೊರಕದಿರುವ ಸಣ್ಣ ಜಾತಿಗಳಿಗೆ ವೈಜ್ಞಾನಿಕವಾಗಿ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ. ರಾಜ್ಯದಲ್ಲಿರುವ ಜಾತಿಗಳ ಅಂಕಿ–ಅಂಶಗಳು ಅಧಿಕೃತವಾಗಿ ದೊರೆಯಲು ಸಾಧ್ಯವಾಗಲಿದೆ’ ಎಂದು ಒಕ್ಕೂಟದ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು.