<p><strong>ಶನಿವಾರಸಂತೆ:</strong> ಧರ್ಮಸ್ಥಳ ಕುರಿತು ಅಪಪ್ರಚಾರ ನಡೆಸಿ ಕ್ಷೇತ್ರಕ್ಕೆ ಕಳಂಕ ತರಲು ಹುನ್ನಾರ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಶನಿವಾರಸಂತೆ ಶ್ರೀ ಮಂಜುನಾಥಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮೌನ ಮೆರವಣಿಗೆ ನಡೆಸಲಾಯಿತು.</p>.<p>ಗುಡುಗಳಲೆ ಜಂಕ್ಷನ್ನಿಂದ ಮುಖ್ಯರಸ್ತೆ ಮೂಲಕ ಪಟ್ಟಣದ ಕೆಆರ್ಸಿ ವೃತ್ತದಲ್ಲಿರುವ ಬನ್ನಿಮಂಟಪದವರೆಗೆ ಹೊರಟ ಮೌನ ಮೆರವಣಿಗೆಯಲ್ಲಿ ಪಾದಯಾತ್ರೆ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<p>ಪ್ರತಿಭಟನಗಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡ ಎಸ್.ಎನ್.ರಘು, ‘ಕೆಲವರು ನಿರಂತರವಾಗಿ ಹಿಂದೂ ದೇವಾಲಯ ಹಾಗೂ ಹಿಂದೂಪರ ಹೋರಾಟಗಾರರನ್ನು ತುಳಿಯಲು ಪ್ರಯತ್ನ ಪಡುತ್ತಿದ್ದಾರೆ. ಇವರಿಗೆ ಯಾರು ಹಣ ನೀಡುತ್ತಿದ್ದಾರೆ ಮತ್ತು ಇವರನ್ನು ಯಾರು ಬೆಂಬಲಿಸುತ್ತಿದ್ದಾರೆ ಎಂದು ತನಿಖೆ ಆಗಬೇಕು’ ಎಂದು ಹೇಳಿದರು.</p>.<p>ಮುಖಂಡ ಬಿ.ಎಸ್.ಅನಂತ್ಕುಮಾರ್, ರಕ್ಷಿತ್ ಮಾತನಾಡಿದರು. ಪ್ರತಿಭಟನೆಯಲ್ಲಿ ಮಂಜುನಾಥಸ್ವಾಮಿ ಪಾದಯಾತ್ರೆ ಸಮಿತಿಯ ಮುಖಂಡರಾದ ಮಂಜುನಾಥ್ ಅಪ್ಪಶೆಟ್ಟಳ್ಳಿ, ಪಿ.ಎನ್.ಸುಮಂತ್, ಆರ್.ಸಿ.ಪಾಲಾಕ್ಷ, ಮಹೇಶ್, ಅಭಿಷೇಕ್ ಹಾಲ್ಕೆನೆ, ಪುನಿತ್ ತಾಳೂರು, ಯತೀಶ್, ಬಿ.ಜಿ.ಪೃಥ್ವಿ, ಅಶ್ವಥ್ ಬೆಂಬಳೂರು, ಕಿರಣ್ ಅಪ್ಪಶೆಟ್ಟಳ್ಳಿ, ಪ್ರವೀಣ್, ಪ್ರಭಾಕರ್, ದಿನೇಶ್, ಹೇಮಂತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ಧರ್ಮಸ್ಥಳ ಕುರಿತು ಅಪಪ್ರಚಾರ ನಡೆಸಿ ಕ್ಷೇತ್ರಕ್ಕೆ ಕಳಂಕ ತರಲು ಹುನ್ನಾರ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಶನಿವಾರಸಂತೆ ಶ್ರೀ ಮಂಜುನಾಥಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮೌನ ಮೆರವಣಿಗೆ ನಡೆಸಲಾಯಿತು.</p>.<p>ಗುಡುಗಳಲೆ ಜಂಕ್ಷನ್ನಿಂದ ಮುಖ್ಯರಸ್ತೆ ಮೂಲಕ ಪಟ್ಟಣದ ಕೆಆರ್ಸಿ ವೃತ್ತದಲ್ಲಿರುವ ಬನ್ನಿಮಂಟಪದವರೆಗೆ ಹೊರಟ ಮೌನ ಮೆರವಣಿಗೆಯಲ್ಲಿ ಪಾದಯಾತ್ರೆ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<p>ಪ್ರತಿಭಟನಗಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡ ಎಸ್.ಎನ್.ರಘು, ‘ಕೆಲವರು ನಿರಂತರವಾಗಿ ಹಿಂದೂ ದೇವಾಲಯ ಹಾಗೂ ಹಿಂದೂಪರ ಹೋರಾಟಗಾರರನ್ನು ತುಳಿಯಲು ಪ್ರಯತ್ನ ಪಡುತ್ತಿದ್ದಾರೆ. ಇವರಿಗೆ ಯಾರು ಹಣ ನೀಡುತ್ತಿದ್ದಾರೆ ಮತ್ತು ಇವರನ್ನು ಯಾರು ಬೆಂಬಲಿಸುತ್ತಿದ್ದಾರೆ ಎಂದು ತನಿಖೆ ಆಗಬೇಕು’ ಎಂದು ಹೇಳಿದರು.</p>.<p>ಮುಖಂಡ ಬಿ.ಎಸ್.ಅನಂತ್ಕುಮಾರ್, ರಕ್ಷಿತ್ ಮಾತನಾಡಿದರು. ಪ್ರತಿಭಟನೆಯಲ್ಲಿ ಮಂಜುನಾಥಸ್ವಾಮಿ ಪಾದಯಾತ್ರೆ ಸಮಿತಿಯ ಮುಖಂಡರಾದ ಮಂಜುನಾಥ್ ಅಪ್ಪಶೆಟ್ಟಳ್ಳಿ, ಪಿ.ಎನ್.ಸುಮಂತ್, ಆರ್.ಸಿ.ಪಾಲಾಕ್ಷ, ಮಹೇಶ್, ಅಭಿಷೇಕ್ ಹಾಲ್ಕೆನೆ, ಪುನಿತ್ ತಾಳೂರು, ಯತೀಶ್, ಬಿ.ಜಿ.ಪೃಥ್ವಿ, ಅಶ್ವಥ್ ಬೆಂಬಳೂರು, ಕಿರಣ್ ಅಪ್ಪಶೆಟ್ಟಳ್ಳಿ, ಪ್ರವೀಣ್, ಪ್ರಭಾಕರ್, ದಿನೇಶ್, ಹೇಮಂತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>