<p><strong>ಸುಂಟಿಕೊಪ್ಪ</strong>: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಹಾಗೂ ಭೂಮಿಕ ಸ್ವಸಹಾಯ ಸಂಘ ಸಂಯುಕ್ತಾಶ್ರಯದಲ್ಲಿ ಮಕ್ಕಳಿಗೆ ಅಜ್ಜಿಯ ಕೈ ತುತ್ತು ಮತ್ತು ಸ್ವ ಉದ್ಯೋಗದ ಕುರಿತು ಕಾನ್ಬೈಲ್ ವಿಭಾಗದ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ ನಡೆಯಿತು.</p>.<p>ಸಮೀಪದ ಮಂಜಿಕೆರೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಮಾಲಿನಿ, ಮಕ್ಕಳಿಗೆ ಅಜ್ಜಿಯಂದಿರ ಕೈ ತುತ್ತು ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಮಕ್ಕಳಲ್ಲಿ ಹಿಂದಿನ ಕಾಲದ ಆಚಾರ ವಿಚಾರ, ವೈಚಾರಿಕತೆ ಮರೆಯಾಗುತ್ತಿದೆ. ಈ ದಿಸೆಯಲ್ಲಿ ಮಕ್ಕಳಿಗೆ ಹಿರಿಯರ ಸಂಬಂಧಗಳನ್ನು ಗಟ್ಟಿಗೊಳಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. </p>.<p>ಸ್ವ ಉದ್ಯೋಗದಿಂದ ಸುಭದ್ರ ಜೀವನ ನಿರ್ವಹಿಸಬಹುದು. ಕುಟುಂಬಗಳ ನಿರ್ವಹಣೆಗೂ ಸಹಕಾರಿಯಾಗಲಿದೆ ಎಂದರು.</p>.<p>ಸಮಾರಂಭದ ಅಧ್ಯಕ್ಷತೆಯನ್ನು ಭೂಮಿಕ ತಂಡದ ಸದಸ್ಯೆ ಪೂವಮ್ಮ ವಹಿಸಿದ್ದರು. ಗ್ರಾಮದ ಹಿರಿಯರಿಂದ ಮಕ್ಕಳಿಗೆ ಕೈ ತುತ್ತು ನೀಡಲಾಯಿತು.</p>.<p>ಕಾನ್ಬೈಲ್ ವ್ಯಾಪ್ತಿಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ಧೃತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು.</p>.<p>ಕಾನ್ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಹಾಗೂ ಭೂಮಿಕ ಸ್ವಸಹಾಯ ಸಂಘ ಸಂಯುಕ್ತಾಶ್ರಯದಲ್ಲಿ ಮಕ್ಕಳಿಗೆ ಅಜ್ಜಿಯ ಕೈ ತುತ್ತು ಮತ್ತು ಸ್ವ ಉದ್ಯೋಗದ ಕುರಿತು ಕಾನ್ಬೈಲ್ ವಿಭಾಗದ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ ನಡೆಯಿತು.</p>.<p>ಸಮೀಪದ ಮಂಜಿಕೆರೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಮಾಲಿನಿ, ಮಕ್ಕಳಿಗೆ ಅಜ್ಜಿಯಂದಿರ ಕೈ ತುತ್ತು ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಮಕ್ಕಳಲ್ಲಿ ಹಿಂದಿನ ಕಾಲದ ಆಚಾರ ವಿಚಾರ, ವೈಚಾರಿಕತೆ ಮರೆಯಾಗುತ್ತಿದೆ. ಈ ದಿಸೆಯಲ್ಲಿ ಮಕ್ಕಳಿಗೆ ಹಿರಿಯರ ಸಂಬಂಧಗಳನ್ನು ಗಟ್ಟಿಗೊಳಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. </p>.<p>ಸ್ವ ಉದ್ಯೋಗದಿಂದ ಸುಭದ್ರ ಜೀವನ ನಿರ್ವಹಿಸಬಹುದು. ಕುಟುಂಬಗಳ ನಿರ್ವಹಣೆಗೂ ಸಹಕಾರಿಯಾಗಲಿದೆ ಎಂದರು.</p>.<p>ಸಮಾರಂಭದ ಅಧ್ಯಕ್ಷತೆಯನ್ನು ಭೂಮಿಕ ತಂಡದ ಸದಸ್ಯೆ ಪೂವಮ್ಮ ವಹಿಸಿದ್ದರು. ಗ್ರಾಮದ ಹಿರಿಯರಿಂದ ಮಕ್ಕಳಿಗೆ ಕೈ ತುತ್ತು ನೀಡಲಾಯಿತು.</p>.<p>ಕಾನ್ಬೈಲ್ ವ್ಯಾಪ್ತಿಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ಧೃತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು.</p>.<p>ಕಾನ್ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>