<p><strong>ವಿರಾಜಪೇಟೆ:</strong> ಆಧುನಿಕತೆ ಎಲ್ಲೆಡೆ ಪಸರಿಸಿ ಪೂರ್ವಜರು ನಡೆಸಿಕೊಂಡ ಬಂದ ಜೀವನ ಪದ್ಧತಿಯು ಇಂದು ಕಣ್ಮರೆಯಾಗುತ್ತಿದೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು.</p>.<p>ಸಮೀಪದ ನಾಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಪಟ್ಟಣದ ಸಂತ ಅನ್ನಮ್ಮ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸೇವೆ ಎಂಬುದು ಜೀವನ ಅವಿಭಾಜ್ಯ ಅಂಗ ಎಂದು ಪರಿಗಣಿಸುವಂತಾಗಬೇಕು. ಸೇವಾ ಮನೋಭಾವ ಮತ್ತು ಪರಿಸರ ಜಾಗೃತಿ ವಿದ್ಯಾರ್ಥಿ ಜೀವನದಲ್ಲಿ ಜಾಗೃತವಾಗಿರಬೇಕು. ವಿಜ್ಞಾನ ಎಷ್ಟೇ ಮುಂದುವರೆದಿದ್ದರೂ ಪ್ರಕೃತಿ ಮುನಿದಲ್ಲಿ ಸರ್ವ ನಾಶಕ್ಕೆ ನಾಂದಿಯಾಗುವುದು ಶತಸಿದ್ಧ. ಪರಿಸರವನ್ನು ಉಳಿಸಿಕೊಂಡು ವಿಜ್ಞಾನವನ್ನು ಬೆಳಸುವುದು ಸೂಕ್ತ ಎಂದರು.</p>.<p>ಕೃಷಿಕರಾದ ಕುಪ್ಪಂಡ ಗೋಪಾಲ್ ಸುಬ್ಬಯ್ಯ ಅವರು ಮಾತನಾಡಿ, ಆಧುನಿಕತೆ ಮತ್ತು ಹಣ ಮಾಡುವ ಚಿಂತನೆಯಿಂದಾಗಿ ಮಕ್ಕಳು ತಮ್ಮ ಪೋಷಕರನ್ನು ಮರೆಯುವಂತಾಗಿದೆ. ಜೀವನದಲ್ಲಿ ಎಲ್ಲವನ್ನೂ ಪಡೆಯಲು ಅವಕಾಶವಿದೆ. ಆದರೆ ಜನ್ಮಕೊಟ್ಟ ತಂದೆ ತಾಯಿಯನ್ನು ಪಡೆಯಲು ಅಸಾಧ್ಯ. ಜೀವನ ನಡೆಸಲು ಮಾತ್ರ ಶಿಕ್ಷಣ ಸಿಮೀತವಾಗಬೇಕು, ಹೊರತು ವಿನಾಶಕ್ಕೆ ಉಪಯೋಗವಾಗಬಾರದು ಎಂದರು.</p>.<p>ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಹಾಗೂ ಶಾಲೆಯ ಮುಖ್ಯಶಿಕ್ಷಕಿ ಫ್ಯಾನ್ಸಿ ಲೋಬೋ ಅವರು ಸಭೆಯಲ್ಲಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ ಘಟಕದ ಶಿಬಿರಾಧಿಕಾರಿ ಬಿ.ಎಸ್. ಶಾಂತಿಭೂಷಣ್ ಅವರು ವರದಿ ವಾಚಿಸಿದರು. ವೇದಿಕೆಯಲ್ಲಿ ಕುಪ್ಪಂಡ ಗೋಪಾಲ್ ಸೋಮಯ್ಯ ಉಪಸ್ಥಿತರಿದ್ದರು.<br /> ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಶಾಲೆಯ ಶಿಕ್ಷಕರು, ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಆಧುನಿಕತೆ ಎಲ್ಲೆಡೆ ಪಸರಿಸಿ ಪೂರ್ವಜರು ನಡೆಸಿಕೊಂಡ ಬಂದ ಜೀವನ ಪದ್ಧತಿಯು ಇಂದು ಕಣ್ಮರೆಯಾಗುತ್ತಿದೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು.</p>.<p>ಸಮೀಪದ ನಾಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಪಟ್ಟಣದ ಸಂತ ಅನ್ನಮ್ಮ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸೇವೆ ಎಂಬುದು ಜೀವನ ಅವಿಭಾಜ್ಯ ಅಂಗ ಎಂದು ಪರಿಗಣಿಸುವಂತಾಗಬೇಕು. ಸೇವಾ ಮನೋಭಾವ ಮತ್ತು ಪರಿಸರ ಜಾಗೃತಿ ವಿದ್ಯಾರ್ಥಿ ಜೀವನದಲ್ಲಿ ಜಾಗೃತವಾಗಿರಬೇಕು. ವಿಜ್ಞಾನ ಎಷ್ಟೇ ಮುಂದುವರೆದಿದ್ದರೂ ಪ್ರಕೃತಿ ಮುನಿದಲ್ಲಿ ಸರ್ವ ನಾಶಕ್ಕೆ ನಾಂದಿಯಾಗುವುದು ಶತಸಿದ್ಧ. ಪರಿಸರವನ್ನು ಉಳಿಸಿಕೊಂಡು ವಿಜ್ಞಾನವನ್ನು ಬೆಳಸುವುದು ಸೂಕ್ತ ಎಂದರು.</p>.<p>ಕೃಷಿಕರಾದ ಕುಪ್ಪಂಡ ಗೋಪಾಲ್ ಸುಬ್ಬಯ್ಯ ಅವರು ಮಾತನಾಡಿ, ಆಧುನಿಕತೆ ಮತ್ತು ಹಣ ಮಾಡುವ ಚಿಂತನೆಯಿಂದಾಗಿ ಮಕ್ಕಳು ತಮ್ಮ ಪೋಷಕರನ್ನು ಮರೆಯುವಂತಾಗಿದೆ. ಜೀವನದಲ್ಲಿ ಎಲ್ಲವನ್ನೂ ಪಡೆಯಲು ಅವಕಾಶವಿದೆ. ಆದರೆ ಜನ್ಮಕೊಟ್ಟ ತಂದೆ ತಾಯಿಯನ್ನು ಪಡೆಯಲು ಅಸಾಧ್ಯ. ಜೀವನ ನಡೆಸಲು ಮಾತ್ರ ಶಿಕ್ಷಣ ಸಿಮೀತವಾಗಬೇಕು, ಹೊರತು ವಿನಾಶಕ್ಕೆ ಉಪಯೋಗವಾಗಬಾರದು ಎಂದರು.</p>.<p>ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಹಾಗೂ ಶಾಲೆಯ ಮುಖ್ಯಶಿಕ್ಷಕಿ ಫ್ಯಾನ್ಸಿ ಲೋಬೋ ಅವರು ಸಭೆಯಲ್ಲಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ ಘಟಕದ ಶಿಬಿರಾಧಿಕಾರಿ ಬಿ.ಎಸ್. ಶಾಂತಿಭೂಷಣ್ ಅವರು ವರದಿ ವಾಚಿಸಿದರು. ವೇದಿಕೆಯಲ್ಲಿ ಕುಪ್ಪಂಡ ಗೋಪಾಲ್ ಸೋಮಯ್ಯ ಉಪಸ್ಥಿತರಿದ್ದರು.<br /> ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಶಾಲೆಯ ಶಿಕ್ಷಕರು, ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>