<p><strong>ಗೋಣಿಕೊಪ್ಪಲು</strong>: ಕೊಡಗು ಸಂರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಮೈಸೂರಿನಲ್ಲಿ ಸೋಮವಾರ ಭೇಟಿಯಾಗಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.</p>.<p>ಅಂತರಾಷ್ಟ್ರೀಯ ಮಾರುಕಟ್ಟೆ ಅನುಗುಣವಾಗಿ ರೋಬಸ್ಟಾ ಕಾಫಿಗೆ ಸ್ಥಳೀಯ ಮಾರುಕಟ್ಟೆ ದರದಲ್ಲಿ ವಂಚನೆಯಾಗುತ್ತಿದೆ. ಇದರ ಬಗ್ಗೆ ಗಮನ ಹರಿಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು. ಕೇಂದ್ರ ವಾಣಿಜ್ಯ ಸಚಿವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡಿದರು.</p>.<p>ಮನವಿ ಸ್ವೀಕರಿಸಿದ ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಭಾರತೀಯ ಕಾಫಿ ಮಂಡಳಿಯೊಂದಿಗೆ ನೇರ ಮಾತುಕತೆಗೆ ವೇದಿಕೆ ಕಲ್ಪಿಸಲಾಗುವುದು. ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಕಾಫಿ ಸಮ್ಮೇಳನದಲ್ಲಿ ಪ್ರತ್ಯೇಕ ವೇದಿಕೆ ನಿರ್ಮಿಸಿ ಈ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಲು ಯತ್ನಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಕಾಡಾನೆ, ಮಾನವ ಸಂಘರ್ಷವನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅರಣ್ಯ ಅಂಚಿನಲ್ಲಿ ರೈಲ್ವೆ ಬ್ಯಾರಿಕೇಡ್ ಯೋಜನೆ ಮೂಲಕ ಸುಮಾರು 280 ಕಿ.ಮೀ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.</p>.<p>ಮಳೆಹಾನಿಯಿಂದ ಕಾಫಿ ಬೆಳೆ ನಷ್ಟವಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಪೆಟ್ರೋಲಿಯಂ ನಂತರ ಅತಿ ದೊಡ್ಡ ವಿದೇಶಿ ವಿನಿಮಯಗೊಳಿಸುವ ಕಾಫಿ ಬೆಳೆಗೆ ವಿಮೆ ಸೌಲಭ್ಯ ಇಲ್ಲದ ಬಗ್ಗೆ ಸರ್ಕಾರ ಪ್ರೀಮಿಯಂ ಪಾವತಿಸುವ ರೀತಿಯಲ್ಲಿ ಕಾಫಿ ಬೆಳೆ ನಷ್ಟಕ್ಕೆ ಬೆಳೆ ವಿಮೆಯನ್ನು ಜಾರಿಗೆ ತರುವಂತೆ ಸಂಸದರ ಗಮನಕ್ಕೆ ತರಲಾಯಿತು.</p>.<p>ಕೊಡಗು ಸಂರಕ್ಷಣಾ ವೇದಿಕೆಯ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ, ವೇದಿಕೆಯ ಪ್ರಮುಖರಾದ ಜಮ್ಮಡ ಗಣೇಶ್ ಅಯ್ಯಣ್ಣ, ಮಚ್ಚಾಮಾಡ ಅನೀಶ್ ಮಾದಪ್ಪ, ಪಂದ್ಯಂಡ ಗಿರೀಶ್, ಮಲ್ಲಮಾಡ ಪ್ರಭು ಪೂಣಚ್ಚ, ಅಣ್ಣೀರ ಹರೀಶ್ ಮಾದಪ್ಪ, ಉಳುವಂಗಡ ಲೋಹಿತ್ ಭೀಮಯ್ಯ, ಕೇಚಮಾಡ ವಿಶ್ವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಕೊಡಗು ಸಂರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಮೈಸೂರಿನಲ್ಲಿ ಸೋಮವಾರ ಭೇಟಿಯಾಗಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.</p>.<p>ಅಂತರಾಷ್ಟ್ರೀಯ ಮಾರುಕಟ್ಟೆ ಅನುಗುಣವಾಗಿ ರೋಬಸ್ಟಾ ಕಾಫಿಗೆ ಸ್ಥಳೀಯ ಮಾರುಕಟ್ಟೆ ದರದಲ್ಲಿ ವಂಚನೆಯಾಗುತ್ತಿದೆ. ಇದರ ಬಗ್ಗೆ ಗಮನ ಹರಿಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು. ಕೇಂದ್ರ ವಾಣಿಜ್ಯ ಸಚಿವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡಿದರು.</p>.<p>ಮನವಿ ಸ್ವೀಕರಿಸಿದ ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಭಾರತೀಯ ಕಾಫಿ ಮಂಡಳಿಯೊಂದಿಗೆ ನೇರ ಮಾತುಕತೆಗೆ ವೇದಿಕೆ ಕಲ್ಪಿಸಲಾಗುವುದು. ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಕಾಫಿ ಸಮ್ಮೇಳನದಲ್ಲಿ ಪ್ರತ್ಯೇಕ ವೇದಿಕೆ ನಿರ್ಮಿಸಿ ಈ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಲು ಯತ್ನಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಕಾಡಾನೆ, ಮಾನವ ಸಂಘರ್ಷವನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅರಣ್ಯ ಅಂಚಿನಲ್ಲಿ ರೈಲ್ವೆ ಬ್ಯಾರಿಕೇಡ್ ಯೋಜನೆ ಮೂಲಕ ಸುಮಾರು 280 ಕಿ.ಮೀ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.</p>.<p>ಮಳೆಹಾನಿಯಿಂದ ಕಾಫಿ ಬೆಳೆ ನಷ್ಟವಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಪೆಟ್ರೋಲಿಯಂ ನಂತರ ಅತಿ ದೊಡ್ಡ ವಿದೇಶಿ ವಿನಿಮಯಗೊಳಿಸುವ ಕಾಫಿ ಬೆಳೆಗೆ ವಿಮೆ ಸೌಲಭ್ಯ ಇಲ್ಲದ ಬಗ್ಗೆ ಸರ್ಕಾರ ಪ್ರೀಮಿಯಂ ಪಾವತಿಸುವ ರೀತಿಯಲ್ಲಿ ಕಾಫಿ ಬೆಳೆ ನಷ್ಟಕ್ಕೆ ಬೆಳೆ ವಿಮೆಯನ್ನು ಜಾರಿಗೆ ತರುವಂತೆ ಸಂಸದರ ಗಮನಕ್ಕೆ ತರಲಾಯಿತು.</p>.<p>ಕೊಡಗು ಸಂರಕ್ಷಣಾ ವೇದಿಕೆಯ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ, ವೇದಿಕೆಯ ಪ್ರಮುಖರಾದ ಜಮ್ಮಡ ಗಣೇಶ್ ಅಯ್ಯಣ್ಣ, ಮಚ್ಚಾಮಾಡ ಅನೀಶ್ ಮಾದಪ್ಪ, ಪಂದ್ಯಂಡ ಗಿರೀಶ್, ಮಲ್ಲಮಾಡ ಪ್ರಭು ಪೂಣಚ್ಚ, ಅಣ್ಣೀರ ಹರೀಶ್ ಮಾದಪ್ಪ, ಉಳುವಂಗಡ ಲೋಹಿತ್ ಭೀಮಯ್ಯ, ಕೇಚಮಾಡ ವಿಶ್ವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>