ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕೂಗಳತೆಯಲ್ಲಿ ಕೋವಿಡ್‌; ಎಚ್ಚರಿಕೆ ವಹಿಸಿ: ಉಸ್ತುವಾರಿ ಕಾರ್ಯದರ್ಶಿ ಪ್ರಸಾದ್

Published : 23 ಡಿಸೆಂಬರ್ 2023, 6:51 IST
Last Updated : 23 ಡಿಸೆಂಬರ್ 2023, 6:51 IST
ಫಾಲೋ ಮಾಡಿ
Comments
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಶುಕ್ರವಾರ ಮಡಿಕೇರಿಯಲ್ಲಿ ನಡೆಸಿದ ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಕುರಿತ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಶುಕ್ರವಾರ ಮಡಿಕೇರಿಯಲ್ಲಿ ನಡೆಸಿದ ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಕುರಿತ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು
ಯಾವುದೇ ಹಳೇ ಕಾಮಗಾರಿಗಳು ಅರ್ಧಕ್ಕೆ ನಿಲ್ಲದಂತೆ ಸೂಚನೆ ಔಷಧಿ, ವೈದ್ಯಕೀಯ ಉಪಕರಣ ಇಲ್ಲದಿದ್ದರೆ ಪ್ರಸ್ತಾವ ಸಲ್ಲಿಸಲು ನಿರ್ದೇಶನ ಹಲವು ವಿಷಯಗಳ ಕುರಿತು ಚರ್ಚೆ
‘ಗೃಹಲಕ್ಷ್ಮಿ’; 18 ಸಾವಿರ ಕುಟುಂಬದ ಮಹಿಳೆಯರ ನೋಂದಣಿಯೇ ಆಗಿಲ್ಲ!
ಕೊಡಗು ಜಿಲ್ಲೆಯಲ್ಲಿ ‘ಗೃಹಲಕ್ಷ್ಮಿ’ ಯೋಜನೆಯಡಿ 18 ಸಾವಿರ ಕುಟುಂಬದ ಮಹಿಳೆಯರು ಹೆಸರು ನೋಂದಣಿಯೇ ಆಗಿಲ್ಲ ಎಂಬ ವಿಷಯ ಸಭೆಯಲ್ಲಿ ಪ್ರಸ್ತಾವಕ್ಕೆ ಬಂದಿತು. 1.31 ಲಕ್ಷ ಮಹಿಳೆಯರು ಹೆಸರು ನೋಂದಾಯಿಸುವ ಗುರಿ ಇದ್ದು ಇವರಲ್ಲಿ ಈಗಾಗಲೇ 1.13 ಲಕ್ಷ ಮಹಿಳೆಯರು ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ 18 ಸಾವಿರ ಕುಟುಂಬದ ಮಹಿಳೆಯರು ಹೆಸರು ನೋಂದಾಯಿಸಲು ಬಾಕಿ ಇದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಖೆಯ ಉಪ ನಿರ್ದೇಶಕ ನಟರಾಜು ಮಾಹಿತಿ ನೀಡಿದರು. ಈ ಯೋಜನೆಯಡಿ ನವೆಂಬರ್‌ವರೆಗೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆ. ತಾಂತ್ರಿಕ ಸಮಸ್ಯೆಯಿಂದ 5 ಸಾವಿರ ಮಂದಿಗೆ ಹಣ ಜಮೆ ಆಗಲು ಬಾಕಿ ಇದೆ ಎಂದು ಹೇಳಿದರು.
ಜಿಲ್ಲೆಗೆ ಬರಲಿವೆ ಹೊಸ ಬಸ್‌ಗಳು
‘ಶಕ್ತಿ’ ಯೋಜನೆಯಡಿ ಜಿಲ್ಲೆಗೆ ಹೊಸ ಬಸ್‍ಗಳು ಶೀಘ್ರ ಬರಲಿವೆ. ಈಗಾಗಲೇ ಬಸ್ ಖರೀದಿಗೆ ಮುಂದಾಗಲಾಗಿದೆ ಎಂದು ಸಾರಿಗೆ ಇಲಾಖೆಯ ಕಾರ್ಯದರ್ಶಿಯೂ ಆದ ಡಾ.ಎನ್.ವಿ.ಪ್ರಸಾದ್ ಅವರು ಹೇಳಿದರು. ಯಾವ ಯಾವ ಊರುಗಳಿಗೆ ಬಸ್ ಅಗತ್ಯವಿದೆ. ಅಲ್ಲಿಗೆ ಬಸ್ ಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಗಮನಹರಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT