ಬಾಕಿ ಉಳಿದಿರುವ 76 ಮನೆಗಳ ಹಸ್ತಾಂತರ: ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಮಾತನಾಡಿ, ‘2018ರಲ್ಲಿ ಸುರಿದ ಮಳೆಗೆ ಮನೆ ಕಳೆದುಕೊಂಡವರಿಗೆ ಕರ್ಣಂಗೇರಿಯಲ್ಲಿ 35, ಮದೆನಾಡು ಬಳಿ 80, ಗಾಳಿಬೀಡು ಬಳಿ 140, ಬಿಳಿಗೇರಿ ಬಳಿ 22, ಜಂಬೂರು ಬಳಿ 383 ಮನೆ ಹಸ್ತಾಂತರ ಮಾಡಲಾಗಿದೆ. ಉಳಿದಂತೆ, ಕೆ.ನಿಡುಗಣೆ ಬಳಿ 76 ಮನೆಗಳ ಹಸ್ತಾಂತರಕ್ಕೆ ಬಾಕಿ ಇದೆ’ ಎಂದು ಮಾಹಿತಿ ನೀಡಿದರು.