<p><strong>ಮಡಿಕೇರಿ:</strong> ಕೊಡಗಿನಲ್ಲೂ ಐಎಸ್ (ಇಸ್ಲಾಮಿಕ್ ಸ್ಟೇಟ್) ಉಗ್ರರು ತರಬೇತಿ ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಹರಿದಾಡುತ್ತಿದ್ದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.</p>.<p>‘2015ರಲ್ಲಿ ಗೋಣಿಕೊಪ್ಪಲು ಭಾಗದಲ್ಲಿ ಉಗ್ರರು ತಮ್ಮ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿಯಿತ್ತು. ಆದರೆ, ಇತ್ತೀಚೆಗೆ ಆ ರೀತಿಯ ಚಟುವಟಿಕೆಗಳೂ ಜಿಲ್ಲೆಯಲ್ಲಿ ನಡೆದಿರುವ ಸಾಧ್ಯತೆ ಇಲ್ಲ. ಸಿಸಿಬಿ ತನಿಖಾಧಿಕಾರಿಗಳನ್ನು ಸಂಪರ್ಕಿಸಿದ್ದು, ಅವರೂ ಈ ಮಾಹಿತಿ ನಿರಾಕರಿಸಿದ್ದಾರೆ. ಸದ್ಯಕ್ಕೆ ಅಂಥಹದ್ದು ಯಾವ ಘಟನೆಯೂ ಜಿಲ್ಲೆಯಲ್ಲಿ ನಡೆದಿಲ್ಲ. ಆದರೂ, ನಾವು ಕಟ್ಟೆಚ್ಚರ ವಹಿಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಗೋಣಿಕೊಪ್ಪಲು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ತರಬೇತಿಗೆ ಸ್ಥಳೀಯ ವ್ಯಕ್ತಿಯಿಂದ ಆರ್ಥಿಕ ನೆರವು ಕೋರಿದ್ದೆವು. ಈ ಪ್ರದೇಶವು ಕೇರಳಕ್ಕೂ ಸಮೀಪವಿರುವ ಕಾರಣಕ್ಕೆ ಯುವಕರಿಗೆ ಉಗ್ರ ತರಬೇತಿ, ಸಂಘಟನೆಗೆ ಯೋಜನೆ ರೂಪಿಸಿದ್ದೆವು’ ಎಂದು ಬಂಧಿತ ಶಂಕಿತ ಉಗ್ರರು ಸಿಸಿಬಿ ಪೊಲೀಸರ ಎದುರು ಬಾಯ್ಬಿಟ್ಟಿದ್ದಾರೆ ಎನ್ನುವ ಮಾಹಿತಿ ಜಿಲ್ಲೆಯಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗಿನಲ್ಲೂ ಐಎಸ್ (ಇಸ್ಲಾಮಿಕ್ ಸ್ಟೇಟ್) ಉಗ್ರರು ತರಬೇತಿ ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಹರಿದಾಡುತ್ತಿದ್ದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.</p>.<p>‘2015ರಲ್ಲಿ ಗೋಣಿಕೊಪ್ಪಲು ಭಾಗದಲ್ಲಿ ಉಗ್ರರು ತಮ್ಮ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿಯಿತ್ತು. ಆದರೆ, ಇತ್ತೀಚೆಗೆ ಆ ರೀತಿಯ ಚಟುವಟಿಕೆಗಳೂ ಜಿಲ್ಲೆಯಲ್ಲಿ ನಡೆದಿರುವ ಸಾಧ್ಯತೆ ಇಲ್ಲ. ಸಿಸಿಬಿ ತನಿಖಾಧಿಕಾರಿಗಳನ್ನು ಸಂಪರ್ಕಿಸಿದ್ದು, ಅವರೂ ಈ ಮಾಹಿತಿ ನಿರಾಕರಿಸಿದ್ದಾರೆ. ಸದ್ಯಕ್ಕೆ ಅಂಥಹದ್ದು ಯಾವ ಘಟನೆಯೂ ಜಿಲ್ಲೆಯಲ್ಲಿ ನಡೆದಿಲ್ಲ. ಆದರೂ, ನಾವು ಕಟ್ಟೆಚ್ಚರ ವಹಿಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಗೋಣಿಕೊಪ್ಪಲು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ತರಬೇತಿಗೆ ಸ್ಥಳೀಯ ವ್ಯಕ್ತಿಯಿಂದ ಆರ್ಥಿಕ ನೆರವು ಕೋರಿದ್ದೆವು. ಈ ಪ್ರದೇಶವು ಕೇರಳಕ್ಕೂ ಸಮೀಪವಿರುವ ಕಾರಣಕ್ಕೆ ಯುವಕರಿಗೆ ಉಗ್ರ ತರಬೇತಿ, ಸಂಘಟನೆಗೆ ಯೋಜನೆ ರೂಪಿಸಿದ್ದೆವು’ ಎಂದು ಬಂಧಿತ ಶಂಕಿತ ಉಗ್ರರು ಸಿಸಿಬಿ ಪೊಲೀಸರ ಎದುರು ಬಾಯ್ಬಿಟ್ಟಿದ್ದಾರೆ ಎನ್ನುವ ಮಾಹಿತಿ ಜಿಲ್ಲೆಯಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>