‘2015ರಲ್ಲಿ ಗೋಣಿಕೊಪ್ಪಲು ಭಾಗದಲ್ಲಿ ಉಗ್ರರು ತಮ್ಮ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿಯಿತ್ತು. ಆದರೆ, ಇತ್ತೀಚೆಗೆ ಆ ರೀತಿಯ ಚಟುವಟಿಕೆಗಳೂ ಜಿಲ್ಲೆಯಲ್ಲಿ ನಡೆದಿರುವ ಸಾಧ್ಯತೆ ಇಲ್ಲ. ಸಿಸಿಬಿ ತನಿಖಾಧಿಕಾರಿಗಳನ್ನು ಸಂಪರ್ಕಿಸಿದ್ದು, ಅವರೂ ಈ ಮಾಹಿತಿ ನಿರಾಕರಿಸಿದ್ದಾರೆ. ಸದ್ಯಕ್ಕೆ ಅಂಥಹದ್ದು ಯಾವ ಘಟನೆಯೂ ಜಿಲ್ಲೆಯಲ್ಲಿ ನಡೆದಿಲ್ಲ. ಆದರೂ, ನಾವು ಕಟ್ಟೆಚ್ಚರ ವಹಿಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇರ್ ‘ಪ್ರಜಾವಾಣಿ’ಗೆ ತಿಳಿಸಿದರು.