<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯಲ್ಲಿ ಮಳೆಯೊಂದಿಗೆ ಜನರು ದೀಪಾವಳಿ ಆಚರಿಸಿದರು. ಪಟಾಕಿ ಹೊಡೆಯುವುದಕ್ಕೂ ಬಿಡುವು ನೀಡದಂತೆ ಸುರಿದ ಮಳೆಯಿಂದ ಸಂಭ್ರಮ ಹಿಂದಿನ ವರ್ಷದಷ್ಟು ಇರಲಿಲ್ಲ. ಆದಾಗ್ಯೂ, ಮಳೆ ನಿಂತ ಗಳಿಗೆಯಲ್ಲಿ ಜನರು ಪಟಾಕಿ ಹಚ್ಚಿ ಸಂಭ್ರಮಿಸಿದರು.</p>.<p>ಜಿಲ್ಲೆಯ ಎಲ್ಲ ದೇಗುಲಗಳಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೀಪೋತ್ಸವಗಳು ಜರುಗಿದವು. ಹಲವೆಡೆ ಮಳೆಯಿಂದ ದೀಪ ಹಚ್ಚುವುದಕ್ಕೂ ಸಮಸ್ಯೆ ಎದುರಾಯಿತು.</p>.<p>ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ದೀಪಾವಳಿ ‘ದೀಪೋತ್ಸವ’ ನಡೆಯಿತು. ಸಾವಿರಾರು ದೀಪಗಳನ್ನು ಹಚ್ಚಿ ಜನರು ನಮಿಸಿದರು.</p>.<p>ದೇವಾಲಯದ ಧರ್ಮದರ್ಶಿ ಎಚ್.ಎಸ್.ಗೋವಿಂದಸ್ವಾಮಿ ಅವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ಜರುಗಿತು. ಕಳಸ ಪೂಜೆ, ಅನ್ನದಾನ ಮತ್ತು ಪ್ರಸಾದ ವಿನಿಯೋಗವಾದ ನಂತರ ತಾಯಿಯ ದರ್ಶನ ಹಾಗೂ ದೀಪೋತ್ಸವ ನೆರವೇರಿತು.</p>.<p>108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗಲಿದೆ ಎನ್ನುವ ನಂಬಿಕೆಯ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೀಪೋತ್ಸವದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯಲ್ಲಿ ಮಳೆಯೊಂದಿಗೆ ಜನರು ದೀಪಾವಳಿ ಆಚರಿಸಿದರು. ಪಟಾಕಿ ಹೊಡೆಯುವುದಕ್ಕೂ ಬಿಡುವು ನೀಡದಂತೆ ಸುರಿದ ಮಳೆಯಿಂದ ಸಂಭ್ರಮ ಹಿಂದಿನ ವರ್ಷದಷ್ಟು ಇರಲಿಲ್ಲ. ಆದಾಗ್ಯೂ, ಮಳೆ ನಿಂತ ಗಳಿಗೆಯಲ್ಲಿ ಜನರು ಪಟಾಕಿ ಹಚ್ಚಿ ಸಂಭ್ರಮಿಸಿದರು.</p>.<p>ಜಿಲ್ಲೆಯ ಎಲ್ಲ ದೇಗುಲಗಳಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೀಪೋತ್ಸವಗಳು ಜರುಗಿದವು. ಹಲವೆಡೆ ಮಳೆಯಿಂದ ದೀಪ ಹಚ್ಚುವುದಕ್ಕೂ ಸಮಸ್ಯೆ ಎದುರಾಯಿತು.</p>.<p>ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ದೀಪಾವಳಿ ‘ದೀಪೋತ್ಸವ’ ನಡೆಯಿತು. ಸಾವಿರಾರು ದೀಪಗಳನ್ನು ಹಚ್ಚಿ ಜನರು ನಮಿಸಿದರು.</p>.<p>ದೇವಾಲಯದ ಧರ್ಮದರ್ಶಿ ಎಚ್.ಎಸ್.ಗೋವಿಂದಸ್ವಾಮಿ ಅವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ಜರುಗಿತು. ಕಳಸ ಪೂಜೆ, ಅನ್ನದಾನ ಮತ್ತು ಪ್ರಸಾದ ವಿನಿಯೋಗವಾದ ನಂತರ ತಾಯಿಯ ದರ್ಶನ ಹಾಗೂ ದೀಪೋತ್ಸವ ನೆರವೇರಿತು.</p>.<p>108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗಲಿದೆ ಎನ್ನುವ ನಂಬಿಕೆಯ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೀಪೋತ್ಸವದಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>