<p><strong>ಮಡಿಕೇರಿ</strong>: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಕೇವಲ ಸ್ತ್ರೀಯರಿಗೆ ಮಾತ್ರವಲ್ಲ, ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಎನ್ ಡಿ ಎ ಮೈತ್ರಿಕೂಟದಲ್ಲಿಟ್ಟುಕೊಳ್ಳುತ್ತೀರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.</p><p>ಇಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.</p><p>ಹೆಣ್ಣು ಮಕ್ಕಳಿಗೆ ಅವಮಾನ ಮಾಡುವಂತಹ ಇಂತಹ ಹೇಳಿಕೆಗೆ ನನಗೆ ಕುಮಾರಸ್ವಾಮಿಯಿಂದ ಸ್ಪಷ್ಟನೆ ಬೇಕಿಲ್ಲ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀಡಬೇಕು ಎಂದು ಆಗ್ರಹಿಸಿದರು.</p><p>ಇದು ತಾಯಿ ಚಾಮುಂಡೇಶ್ವರಿಗೆ ಮಾಡಿದ ಅವಮಾನ. ಯಾರು ಲೆಕ್ಕ ಇಡದಿದ್ದರೂ ಕರ್ಮ ಲೆಕ್ಕ ಇಡುತ್ತದೆ ಎಂಬುದನ್ನು ಕುಮಾರಸ್ವಾಮಿ ಮರೆಯಬಾರದು. ಮುಂದಿನ ದಿನಗಳಲ್ಲಿ ಅವರು ಅದರ ಫಲ ಅನುಭವಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಕೇವಲ ಸ್ತ್ರೀಯರಿಗೆ ಮಾತ್ರವಲ್ಲ, ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಎನ್ ಡಿ ಎ ಮೈತ್ರಿಕೂಟದಲ್ಲಿಟ್ಟುಕೊಳ್ಳುತ್ತೀರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.</p><p>ಇಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.</p><p>ಹೆಣ್ಣು ಮಕ್ಕಳಿಗೆ ಅವಮಾನ ಮಾಡುವಂತಹ ಇಂತಹ ಹೇಳಿಕೆಗೆ ನನಗೆ ಕುಮಾರಸ್ವಾಮಿಯಿಂದ ಸ್ಪಷ್ಟನೆ ಬೇಕಿಲ್ಲ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀಡಬೇಕು ಎಂದು ಆಗ್ರಹಿಸಿದರು.</p><p>ಇದು ತಾಯಿ ಚಾಮುಂಡೇಶ್ವರಿಗೆ ಮಾಡಿದ ಅವಮಾನ. ಯಾರು ಲೆಕ್ಕ ಇಡದಿದ್ದರೂ ಕರ್ಮ ಲೆಕ್ಕ ಇಡುತ್ತದೆ ಎಂಬುದನ್ನು ಕುಮಾರಸ್ವಾಮಿ ಮರೆಯಬಾರದು. ಮುಂದಿನ ದಿನಗಳಲ್ಲಿ ಅವರು ಅದರ ಫಲ ಅನುಭವಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>