<p><strong>ಗೋಣಿಕೊಪ್ಪಲು</strong>: ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆ ಎಂಬ ಕಾರಣಕ್ಕೆ, ಸಮೀಪದ ತಿತಿಮತಿ ಆರೋಗ್ಯ ಕೇಂದ್ರದ ವೈದ್ಯರ ಮೇಲೆ ಮೂವರು ಯುವಕರು ಸೋಮವಾರ ಹಲ್ಲೆ ಮಾಡಿದ್ದಾರೆ.</p>.<p>ಡಾ. ಜಿ.ಎಂ. ಹೊಸಮನಿ (70) ಹಲ್ಲೆಗೊಳಗಾದ ವೈದ್ಯ. ಮೈಸೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಈ ಆಸ್ಪತ್ರೆಯನ್ನು ದತ್ತು ತೆಗೆದುಕೊಂಡಿದ್ದು, ಅಲ್ಲಿ ಇವರು ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕೈ ಮೂಳೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗೋಣಿ ಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಆರೋಪಿಗಳಾದ ಶಮೀರ್, ಸೈಯದ್ ಅಲಿ ಹಾಗೂ ಫೈರೋಜ್ ಎಂಬವವರನ್ನು ಗೋಣಿಕೊಪ್ಪಲು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ಆರೋಪಿಗಳು ತಮ್ಮ ಸಂಬಂಧಿ ಶಾಹಿರಾಬಾನು ಅವರನ್ನು ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ವೈದ್ಯರು ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ, ಆಕೆಯ ಸಹೋದರ ಶಮೀರ್ ವೈದ್ಯರೊಂದಿಗೆ ಜಗಳವಾಡಿದ್ದಾನೆ. ಈ ಸಂದರ್ಭದಲ್ಲಿ ಯುವಕರೆಲ್ಲ ಸೇರಿ, ವೈದ್ಯರು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಬಳಿಕ, ಸಂಯಮ ಕಳೆದುಕೊಂಡು ವೈದ್ಯರನ್ನು ಥಳಿಸಿದ್ದಾರೆ. ನಿಯಂತ್ರಣ ತಪ್ಪಿ, ಚರಂಡಿಗೆ ಬಿದ್ದ ಪರಿಣಾಮ ವೈದ್ಯರ ಕೈಗೆ ಬಲವಾದ ಪೆಟ್ಟು ಬಿದ್ದಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆ ಎಂಬ ಕಾರಣಕ್ಕೆ, ಸಮೀಪದ ತಿತಿಮತಿ ಆರೋಗ್ಯ ಕೇಂದ್ರದ ವೈದ್ಯರ ಮೇಲೆ ಮೂವರು ಯುವಕರು ಸೋಮವಾರ ಹಲ್ಲೆ ಮಾಡಿದ್ದಾರೆ.</p>.<p>ಡಾ. ಜಿ.ಎಂ. ಹೊಸಮನಿ (70) ಹಲ್ಲೆಗೊಳಗಾದ ವೈದ್ಯ. ಮೈಸೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಈ ಆಸ್ಪತ್ರೆಯನ್ನು ದತ್ತು ತೆಗೆದುಕೊಂಡಿದ್ದು, ಅಲ್ಲಿ ಇವರು ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕೈ ಮೂಳೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗೋಣಿ ಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಆರೋಪಿಗಳಾದ ಶಮೀರ್, ಸೈಯದ್ ಅಲಿ ಹಾಗೂ ಫೈರೋಜ್ ಎಂಬವವರನ್ನು ಗೋಣಿಕೊಪ್ಪಲು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ಆರೋಪಿಗಳು ತಮ್ಮ ಸಂಬಂಧಿ ಶಾಹಿರಾಬಾನು ಅವರನ್ನು ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ವೈದ್ಯರು ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ, ಆಕೆಯ ಸಹೋದರ ಶಮೀರ್ ವೈದ್ಯರೊಂದಿಗೆ ಜಗಳವಾಡಿದ್ದಾನೆ. ಈ ಸಂದರ್ಭದಲ್ಲಿ ಯುವಕರೆಲ್ಲ ಸೇರಿ, ವೈದ್ಯರು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಬಳಿಕ, ಸಂಯಮ ಕಳೆದುಕೊಂಡು ವೈದ್ಯರನ್ನು ಥಳಿಸಿದ್ದಾರೆ. ನಿಯಂತ್ರಣ ತಪ್ಪಿ, ಚರಂಡಿಗೆ ಬಿದ್ದ ಪರಿಣಾಮ ವೈದ್ಯರ ಕೈಗೆ ಬಲವಾದ ಪೆಟ್ಟು ಬಿದ್ದಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>