‘ಆರೋಪಿಗಳು ತಮ್ಮ ಸಂಬಂಧಿ ಶಾಹಿರಾಬಾನು ಅವರನ್ನು ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ವೈದ್ಯರು ಚಿಕಿತ್ಸೆ ನೀಡಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ, ಆಕೆಯ ಸಹೋದರ ಶಮೀರ್ ವೈದ್ಯರೊಂದಿಗೆ ಜಗಳವಾಡಿದ್ದಾನೆ. ಈ ಸಂದರ್ಭದಲ್ಲಿ ಯುವಕರೆಲ್ಲ ಸೇರಿ, ವೈದ್ಯರು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಬಳಿಕ, ಸಂಯಮ ಕಳೆದುಕೊಂಡು ವೈದ್ಯರನ್ನು ಥಳಿಸಿದ್ದಾರೆ. ನಿಯಂತ್ರಣ ತಪ್ಪಿ, ಚರಂಡಿಗೆ ಬಿದ್ದ ಪರಿಣಾಮ ವೈದ್ಯರ ಕೈಗೆ ಬಲವಾದ ಪೆಟ್ಟು ಬಿದ್ದಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.