<p><strong>ಕುಶಾಲನಗರ (ಕೊಡಗು ಜಿಲ್ಲೆ):</strong> ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಸತೀಶ್ (40) ಅವರು ಇಲ್ಲಿನ ಆನೆಕಾಡು ಸಮೀಪ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>‘ಮಂಡ್ಯ ಜಿಲ್ಲೆಯ ಶಿವಳ್ಳಿಯ ಅವರು ಬೆಳಿಗ್ಗೆ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು. ನಂತರ, ಅವರು ಕಾರಿನಲ್ಲಿ ಮಡಿಕೇರಿ ಕಡೆಗೆ ಹೊರಟಿದ್ದರು. ಮಧ್ಯಾಹ್ನದ ವೇಳೆ ಆನೆಕಾಡು ಸಮೀಪ ರಸ್ತೆಬದಿ ನಿಲ್ಲಿಸಿದ್ದ ಕಾರಿನಲ್ಲಿ ವಿಷದ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಪತಿ ದೀರ್ಘ ಕಾಲದ ಬೆನ್ನುನೋವಿನಿಂದ ಬಳಲುತ್ತಿದ್ದರು. ಹುದ್ದೆಯೂ ಕಾಯಂಗೊಂಡಿರಲಿಲ್ಲ. ಪುತ್ರನಿಗೆ ಅನಾರೋಗ್ಯವಿತ್ತು. ಹೀಗಾಗಿ, ಸುಮಾರು 6 ತಿಂಗಳುಗಳಿಂದ ಇವರು ಖಿನ್ನತೆಗೆ ಒಳಗಾಗಿದ್ದರು’ ಎಂದು ಮೃತ ಸತೀಶ್ ಅವರ ಪತ್ನಿ ಹೇಳಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತದೇಹ ಪತ್ತೆಯಾಗುತ್ತಲೇ ಹೆಣ್ಣು ಭ್ರೂಣ ಪತ್ತೆ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇದೆ ಎಂಬ ಸುದ್ದಿಗಳು ಹರಿದಾಡಿದವು. ಈ ಕುರಿತು ‘ಪ್ರಜಾವಾಣಿ’ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಸಂಪರ್ಕಿಸಿದಾಗ, ‘ವೈದ್ಯರ ಆತ್ಮಹತ್ಯೆ ಪ್ರಕರಣ ತನಿಖಾ ಹಂತದಲ್ಲಿದೆ. ಈ ಕುರಿತು ಹೆಚ್ಚೇನೂ ಹೇಳಲು ಸಾಧ್ಯವಿಲ್ಲ’ ಎಂದರು.</p><p>ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ (ಕೊಡಗು ಜಿಲ್ಲೆ):</strong> ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಸತೀಶ್ (40) ಅವರು ಇಲ್ಲಿನ ಆನೆಕಾಡು ಸಮೀಪ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>‘ಮಂಡ್ಯ ಜಿಲ್ಲೆಯ ಶಿವಳ್ಳಿಯ ಅವರು ಬೆಳಿಗ್ಗೆ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು. ನಂತರ, ಅವರು ಕಾರಿನಲ್ಲಿ ಮಡಿಕೇರಿ ಕಡೆಗೆ ಹೊರಟಿದ್ದರು. ಮಧ್ಯಾಹ್ನದ ವೇಳೆ ಆನೆಕಾಡು ಸಮೀಪ ರಸ್ತೆಬದಿ ನಿಲ್ಲಿಸಿದ್ದ ಕಾರಿನಲ್ಲಿ ವಿಷದ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಪತಿ ದೀರ್ಘ ಕಾಲದ ಬೆನ್ನುನೋವಿನಿಂದ ಬಳಲುತ್ತಿದ್ದರು. ಹುದ್ದೆಯೂ ಕಾಯಂಗೊಂಡಿರಲಿಲ್ಲ. ಪುತ್ರನಿಗೆ ಅನಾರೋಗ್ಯವಿತ್ತು. ಹೀಗಾಗಿ, ಸುಮಾರು 6 ತಿಂಗಳುಗಳಿಂದ ಇವರು ಖಿನ್ನತೆಗೆ ಒಳಗಾಗಿದ್ದರು’ ಎಂದು ಮೃತ ಸತೀಶ್ ಅವರ ಪತ್ನಿ ಹೇಳಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತದೇಹ ಪತ್ತೆಯಾಗುತ್ತಲೇ ಹೆಣ್ಣು ಭ್ರೂಣ ಪತ್ತೆ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇದೆ ಎಂಬ ಸುದ್ದಿಗಳು ಹರಿದಾಡಿದವು. ಈ ಕುರಿತು ‘ಪ್ರಜಾವಾಣಿ’ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಸಂಪರ್ಕಿಸಿದಾಗ, ‘ವೈದ್ಯರ ಆತ್ಮಹತ್ಯೆ ಪ್ರಕರಣ ತನಿಖಾ ಹಂತದಲ್ಲಿದೆ. ಈ ಕುರಿತು ಹೆಚ್ಚೇನೂ ಹೇಳಲು ಸಾಧ್ಯವಿಲ್ಲ’ ಎಂದರು.</p><p>ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>