ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗು: ಹಲವು ಸಮಸ್ಯೆಗಳ ಸುಳಿಯಲ್ಲಿ ಜಿಲ್ಲೆಯ ವೈದ್ಯರು

ವೈದ್ಯರಿಗಿಂತ ಖಾಲಿ ಹುದ್ದೆಗಳೇ ಅಧಿಕ, ಹೊರ ಜಿಲ್ಲೆಗಳಿಂದಲೂ ಬರುತ್ತಿರುವ ರೋಗಿಗಳು
Published : 1 ಜುಲೈ 2024, 5:54 IST
Last Updated : 1 ಜುಲೈ 2024, 5:54 IST
ಫಾಲೋ ಮಾಡಿ
Comments
ವೈದ್ಯರಿಗೆ ಬೇಕಿದೆ ವಿಶೇಷ ವೇತನ ಪ್ಯಾಕೇಜ್ ವಸತಿಗೃಹದ ವ್ಯವಸ್ಥೆಯೂ ಬೇಕಿದೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಮೂಲಸೌಕರ್ಯದ ಅಗತ್ಯ ಇದೆ
ಮೈಸೂರಿಗೆ ಹೋಲಿಸಿದರೆ ಮಡಿಕೇರಿಯಲ್ಲಿ ಚಿಕಿತ್ಸೆ ಪಡೆಯುವುದು ಸುಲಭ. ವೈದ್ಯರು ಅಲೆದಾಡಿಸುವುದಿಲ್ಲ. ಬೇಗನೇ ಚಿಕಿತ್ಸೆ ನೀಡಿ ಉಚಿತವಾಗಿ ಔಷಧವನ್ನೂ ನೀಡುತ್ತಾರೆ.
ಪುಟ್ಟಸ್ವಾಮಿ ಪಿರಿಯಾಪಟ್ಟಣದ ನಿವಾಸಿ.
ವಿಶೇಷ ಪ್ಯಾಕೇಜ್‌ಗೆ ಮನವಿ
ಈಚೆಗಷ್ಟೇ ಜಿಲ್ಲೆಗೆ ಬಂದಿದ್ದ ಆರೋಗ್ಯ ಖಾತೆ ಸಚಿವ ದಿನೇಶ್‌ ಗುಂಡೂರಾವ್ ಅವರ ಬಳಿಯಲ್ಲಿ ಬಹಿರಂಗವಾಗಿಯೇ ಶಾಸಕ ಡಾ.ಮಂತರ್‌ಗೌಡ ಅವರು ಗುಡ್ಡಗಾಡು ಪ್ರದೇಶವಾಗಿರುವ ಕೊಡಗನ್ನು ವಿಶೇಷ ಆದ್ಯತೆಯನ್ನಾಗಿ ಪರಿಗಣಿಸಿ ಇಲ್ಲಿ ಕೆಲಸ ಮಾಡುವ ವೈದ್ಯರಿಗೆ ವಿಶೇಷ ವೇತನ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದರು. ಆಗ ಮಾತ್ರ ಇಲ್ಲಿ ವೈದ್ಯರು ಕೆಲಸ ಮಾಡಲು ಇಚ್ಛಿಸುತ್ತಾರೆ ಎಂದು ಹೇಳಿದರು.
ಬೇರೆ ಜಿಲ್ಲೆಗೆ ಹೋಲಿಸಿದರೆ ಉತ್ತಮ ಸೇವೆ
ಟೀಕೆಗಳು ಏನೇ ಇದ್ದರೂ ಕೊಡಗಿನಲ್ಲಿ ಬೇರೆ ಜಿಲ್ಲೆಗೆ ಹೋಲಿಸಿದರೆ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಬಹಳಷ್ಟು ಮಂದಿ ರೋಗಿಗಳು ಹೇಳುತ್ತಾರೆ. ಲಂಚಗುಳಿತನ ಸತಾಯಿಸುವುದು ನಿರ್ಲಕ್ಷ್ಯ ಇಲ್ಲಿ ಕಡಿಮೆ ಇದೆ. ಹೆಚ್ಚಿನ ವೈದ್ಯರು ಲಂಚ ಕೇಳುವುದಿಲ್ಲ ಸತಾಯಿಸುವುದಿಲ್ಲ ಉಚಿತ ಔಷಧಿಗಳನ್ನು ನೀಡುತ್ತಾರೆ ಹೆಚ್ಚಿನ ನಿಗಾ ವಹಿಸುತ್ತಾರೆ ಎಂಬ ಅಭಿಪ್ರಾಯ ಹೊರ ಜಿಲ್ಲೆಗಳಲ್ಲಿದೆ. ಇದರಿಂದಾಗಿ ಪಕ್ಕದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮಾತ್ರವಲ್ಲ ಹುಣಸೂರಿನಿಂದಲೂ ನಿತ್ಯವೂ ಇಲ್ಲಿಗೆ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ.  ಇದು ಕೊಡಗು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರ ಹೆಗ್ಗಳಿಕೆ ಎನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT